ಉಡುಪಿ: ಪೂರ್ವಾನುಮತಿ ಪಡೆಯದೆ ಹಿಂದೂ ಜಾಗರಣ ವೇದಿಕೆ ಸಂಘಟನೆಯ ಕಾರ್ಯಕರ್ತರು ಉಡುಪಿಯ ಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಿಯ ಸನ್ನಿಧಾನದವರೆಗೂ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.