<p><strong>ಉಡುಪಿ:</strong> ಆತ್ರಾಡಿ ಗ್ರಾಮದ ಮಹಮ್ಮದ್ ನಿಹಾಲ್ ಎಂಬುವವರಿಗೆ ಚಾಕು ತೋರಿಸಿ, ಹಣ ದೋಚಿದ ಆರೋಪದಲ್ಲಿ ನಾಲ್ವರ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬಸ್ಸಿನ ಕಲೆಕ್ಷನ್ ವ್ಯವಹಾರ ನೋಡಿಕೊಳ್ಳುವ ನಿಹಾಲ್ರನ್ನು ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಡ್ಡಗಟ್ಟಿ, ಚಾಕು ತೋರಿಸಿ ಬಲವಂತವಾಗಿ ಕರೆದುಕೊಂಡು ಹೋಗಿ ಅವರ ಬಳಿಯಿದ್ದ ₹1 ಲಕ್ಷವನ್ನು ದೋಚಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p>ಈ ಸಂಬಂಧ ಶಾರೀಕ್, ಇರ್ಫಾನ್ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಹೂಡಿಕೆ ಆಮಿಷ: ಹಣ ವಂಚನೆ</p>.<p>ಉಡುಪಿ: ವಾಟ್ಸ್ಆ್ಯಪ್ನಲ್ಲಿ ಹೂಡಿಕೆಗೆ ಸಂಬಂಧಿಸಿದ ಸಂದೇಶ ಕಳುಹಿಸಿ, ಹಣ ಪಡೆದು ವಂಚಿಸಿದ ಆರೋಪದಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವೇದವ್ಯಾಸ್ ಎಂಬುವವರಿಗೆ ಅಪರಿಚಿತರು ಟ್ರೇಡಿಂಗ್ ಬಗ್ಗೆ ಸಂದೇಶ ಕಳುಹಿಸಿ, ಹೆಚ್ಚಿನ ಲಾಭ ಪಡೆಯುವ ಆಮಿಷವೊಡ್ಡಿದ್ದರು. ಅವರ ಬ್ಯಾಂಕ್ ಖಾತೆಗಳಿಗೆ ಹಣ ಕಳುಹಿಸಲು ಸೂಚಿಸಿದ್ದರು. ಅದರಂತೆ ವೇದವ್ಯಾಸ್ ಅವರು, ಹಂತ ಹಂತವಾಗಿ ಒಟ್ಟು ₹23,73,891 ವನ್ನು ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.</p>.<p>ಹೂಡಿಕೆ ಮಾಡಿದ ಹಣವನ್ನಾಗಲೀ, ಲಾಭವನ್ನಾಗಲಿ ನೀಡದೆ ಅಪರಿಚಿತರು ವಂಚಿಸಿರುವುದಾಗಿ ದೂರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಆತ್ರಾಡಿ ಗ್ರಾಮದ ಮಹಮ್ಮದ್ ನಿಹಾಲ್ ಎಂಬುವವರಿಗೆ ಚಾಕು ತೋರಿಸಿ, ಹಣ ದೋಚಿದ ಆರೋಪದಲ್ಲಿ ನಾಲ್ವರ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬಸ್ಸಿನ ಕಲೆಕ್ಷನ್ ವ್ಯವಹಾರ ನೋಡಿಕೊಳ್ಳುವ ನಿಹಾಲ್ರನ್ನು ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಡ್ಡಗಟ್ಟಿ, ಚಾಕು ತೋರಿಸಿ ಬಲವಂತವಾಗಿ ಕರೆದುಕೊಂಡು ಹೋಗಿ ಅವರ ಬಳಿಯಿದ್ದ ₹1 ಲಕ್ಷವನ್ನು ದೋಚಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p>ಈ ಸಂಬಂಧ ಶಾರೀಕ್, ಇರ್ಫಾನ್ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಹೂಡಿಕೆ ಆಮಿಷ: ಹಣ ವಂಚನೆ</p>.<p>ಉಡುಪಿ: ವಾಟ್ಸ್ಆ್ಯಪ್ನಲ್ಲಿ ಹೂಡಿಕೆಗೆ ಸಂಬಂಧಿಸಿದ ಸಂದೇಶ ಕಳುಹಿಸಿ, ಹಣ ಪಡೆದು ವಂಚಿಸಿದ ಆರೋಪದಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವೇದವ್ಯಾಸ್ ಎಂಬುವವರಿಗೆ ಅಪರಿಚಿತರು ಟ್ರೇಡಿಂಗ್ ಬಗ್ಗೆ ಸಂದೇಶ ಕಳುಹಿಸಿ, ಹೆಚ್ಚಿನ ಲಾಭ ಪಡೆಯುವ ಆಮಿಷವೊಡ್ಡಿದ್ದರು. ಅವರ ಬ್ಯಾಂಕ್ ಖಾತೆಗಳಿಗೆ ಹಣ ಕಳುಹಿಸಲು ಸೂಚಿಸಿದ್ದರು. ಅದರಂತೆ ವೇದವ್ಯಾಸ್ ಅವರು, ಹಂತ ಹಂತವಾಗಿ ಒಟ್ಟು ₹23,73,891 ವನ್ನು ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.</p>.<p>ಹೂಡಿಕೆ ಮಾಡಿದ ಹಣವನ್ನಾಗಲೀ, ಲಾಭವನ್ನಾಗಲಿ ನೀಡದೆ ಅಪರಿಚಿತರು ವಂಚಿಸಿರುವುದಾಗಿ ದೂರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>