<p><strong>ಉಡುಪಿ</strong>: ಮುಂಬೈ ಮೂಲದ ಬಾರ್ ಮಾಲೀಕವಶಿಷ್ಟ ಸತ್ಯನಾರಾಯಣ ಯಾದವ್ ಕೊಲೆ ಪ್ರಕರಣದಲ್ಲಿ ಸೈಫ್ ಅಲಿಯಾಸ್ ಸೈಫುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವಶಿಷ್ಟ ಯಾದವ್ ಕೊಲೆ ಪ್ರಕರಣದಲ್ಲಿ ಈಗಾಗಲೇಸುಮಿತ್ ಮಿಶ್ರಾ, ಅಬ್ದುಲ್ ಶುಕೂರ್, ಅವಿನಾಶ್ ಕರ್ಕೆರಾ, ಮೊಹಮ್ಮದ್ ಶರೀಪ್ನನ್ನು ಬಂಧಿಸಿದ್ದು, ಸೈಫ್ ಬಂಧನದ ಮೂಲಕ ಆರೋಪಿಗಳ ಸಂಖ್ಯೆ ಐದಕ್ಕೇರಿದಂತಾಗಿದೆ.</p>.<p>ಕೊಲೆಯಲ್ಲಿ ಸೈಫ್ ಪಾತ್ರವಿರುವ ಬಗ್ಗೆ ತಿಳಿಯುತ್ತಿದ್ದಂತೆ ಪೊಲೀಸರು ಕೊಡವೂರಿನಲ್ಲಿರುವ ಸೈಫ್ ನಿವಾಸಕ್ಕೆ ತೆರಳಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಜನರ ಕೈವಾಡ ಶಂಕೆಯಿದ್ದು ತನಿಖೆ ನಡೆಯುತ್ತಿದೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.</p>.<p>ಸೈಫ್ ಮೇಲೆ ಹಿಂದೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. ಜತೆಗೆ, ಕೊಲೆಗೆ ಕಾರಣ ಏನು, ಕೊಲೆಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಈಗಾಗಲೇ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಫೆ.17ರವರೆಗೆ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿದೆ. ಹಣಕಾಸಿನ ವಿಚಾರದಲ್ಲಿನ ವೈಷಮ್ಯವೇ ಕೊಲೆಗೆ ಕಾರಣ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಮುಂಬೈ ಮೂಲದ ಬಾರ್ ಮಾಲೀಕವಶಿಷ್ಟ ಸತ್ಯನಾರಾಯಣ ಯಾದವ್ ಕೊಲೆ ಪ್ರಕರಣದಲ್ಲಿ ಸೈಫ್ ಅಲಿಯಾಸ್ ಸೈಫುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವಶಿಷ್ಟ ಯಾದವ್ ಕೊಲೆ ಪ್ರಕರಣದಲ್ಲಿ ಈಗಾಗಲೇಸುಮಿತ್ ಮಿಶ್ರಾ, ಅಬ್ದುಲ್ ಶುಕೂರ್, ಅವಿನಾಶ್ ಕರ್ಕೆರಾ, ಮೊಹಮ್ಮದ್ ಶರೀಪ್ನನ್ನು ಬಂಧಿಸಿದ್ದು, ಸೈಫ್ ಬಂಧನದ ಮೂಲಕ ಆರೋಪಿಗಳ ಸಂಖ್ಯೆ ಐದಕ್ಕೇರಿದಂತಾಗಿದೆ.</p>.<p>ಕೊಲೆಯಲ್ಲಿ ಸೈಫ್ ಪಾತ್ರವಿರುವ ಬಗ್ಗೆ ತಿಳಿಯುತ್ತಿದ್ದಂತೆ ಪೊಲೀಸರು ಕೊಡವೂರಿನಲ್ಲಿರುವ ಸೈಫ್ ನಿವಾಸಕ್ಕೆ ತೆರಳಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಜನರ ಕೈವಾಡ ಶಂಕೆಯಿದ್ದು ತನಿಖೆ ನಡೆಯುತ್ತಿದೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.</p>.<p>ಸೈಫ್ ಮೇಲೆ ಹಿಂದೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. ಜತೆಗೆ, ಕೊಲೆಗೆ ಕಾರಣ ಏನು, ಕೊಲೆಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಈಗಾಗಲೇ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಫೆ.17ರವರೆಗೆ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿದೆ. ಹಣಕಾಸಿನ ವಿಚಾರದಲ್ಲಿನ ವೈಷಮ್ಯವೇ ಕೊಲೆಗೆ ಕಾರಣ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>