<p><strong>ಉಡುಪಿ</strong>: ಷೇರು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಉದ್ಯಮಿಯನ್ನು ಬೆದರಿಸಿ ₹ 1,99,500 ನಗದು, ಮೊಬೈಲ್, ವಾಚ್ ಹಾಗೂ ಇತರೆ ದಾಖಲೆಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಗಳ ಕಾರನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಪ್ರಕರಣದ ವಿವರ:</strong></p>.<p>ತುಮಕೂರು ಜಿಲ್ಲೆಯ ಅಶೋಕ್ ಕುಮಾರ್ ಉಡುಪಿ ರಥಬೀದಿಯ ವಾದಿರಾಜ ಕಾಂಫ್ಲೆಕ್ಸ್ನಲ್ಲಿರುವ ಗ್ಲೋಬಲ್ ಟೈಮ್ ಟ್ರೇಡರ್ಸ್ ಕಚೇರಿಯಲ್ಲಿ ಷೇರು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಕಚೇರಿಗೆ ಬಂದಿದ್ದ ಸಂತೋಷ ಎಂಬಾತ ವ್ಯವಹಾರದ ಮಾತುಕತೆಗಾಗಿ ಇನ್ನೊವಾ ಕಾರಿನಲ್ಲಿ ಕರೆದೊಯ್ದಿದ್ದ. ಈ ಸಂದರ್ಭ ದಾರಿ ಮಧ್ಯೆ ಇತರೆ ನಾಲ್ವರು ಆರೋಪಿಗಳು ಸೇರಿಕೊಂಡು ಅಶೋಕ್ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ₹ 70 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.</p>.<p>ಅಶೋಕ್ ಒಪ್ಪದಿದ್ದಾಗ ರೆಸಾರ್ಟ್ಗೆ ಕರದೊಯ್ದು ಹಲ್ಲೆ ನಡೆಸಿದ್ದರು. ಬಳಿಕ ಆರೋಪಿಗಳು ಶನಿವಾರ ಮಹೇಶ್ ಅವರನ್ನು ಕೆನರಾ ಬ್ಯಾಂಕಿಗೆ ಕರೆತಂದು ಹಣ ಡ್ರಾ ಮಾಡಿಕೊಡುವಂತೆ ಬಲವಂತ ಮಾಡಿದ್ದರು. ಈ ಸಂದರ್ಭ ಮಹೇಶ್ ಜೋರಾಗಿ ಬೊಬ್ಬೆ ಹಾಕಿದಾಗ, ಆರೋಪಿಗಳು ಮಹೇಶ್ ಬಳಿಯಿದ್ದ ₹ 1,99,500 ನಗದು, 2 ಮೊಬೈಲ್, ವಾಚ್, ಮಾರ್ಕ್ಸ್ ಕಾರ್ಡ್, ಕಂಪೆನಿ ಪರವಾನಗಿ, ಬೈಕ್ನ ಆರ್ಸಿ ಕಾರ್ಡ್, ಡಿಎಲ್, ಚೆಕ್, ಪಾಸ್ ಪುಸ್ತಕ ಹಾಗೂ ಇತರೆ ದಾಖಲೆಗಳಿದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಷೇರು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಉದ್ಯಮಿಯನ್ನು ಬೆದರಿಸಿ ₹ 1,99,500 ನಗದು, ಮೊಬೈಲ್, ವಾಚ್ ಹಾಗೂ ಇತರೆ ದಾಖಲೆಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಗಳ ಕಾರನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಪ್ರಕರಣದ ವಿವರ:</strong></p>.<p>ತುಮಕೂರು ಜಿಲ್ಲೆಯ ಅಶೋಕ್ ಕುಮಾರ್ ಉಡುಪಿ ರಥಬೀದಿಯ ವಾದಿರಾಜ ಕಾಂಫ್ಲೆಕ್ಸ್ನಲ್ಲಿರುವ ಗ್ಲೋಬಲ್ ಟೈಮ್ ಟ್ರೇಡರ್ಸ್ ಕಚೇರಿಯಲ್ಲಿ ಷೇರು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಕಚೇರಿಗೆ ಬಂದಿದ್ದ ಸಂತೋಷ ಎಂಬಾತ ವ್ಯವಹಾರದ ಮಾತುಕತೆಗಾಗಿ ಇನ್ನೊವಾ ಕಾರಿನಲ್ಲಿ ಕರೆದೊಯ್ದಿದ್ದ. ಈ ಸಂದರ್ಭ ದಾರಿ ಮಧ್ಯೆ ಇತರೆ ನಾಲ್ವರು ಆರೋಪಿಗಳು ಸೇರಿಕೊಂಡು ಅಶೋಕ್ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ₹ 70 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.</p>.<p>ಅಶೋಕ್ ಒಪ್ಪದಿದ್ದಾಗ ರೆಸಾರ್ಟ್ಗೆ ಕರದೊಯ್ದು ಹಲ್ಲೆ ನಡೆಸಿದ್ದರು. ಬಳಿಕ ಆರೋಪಿಗಳು ಶನಿವಾರ ಮಹೇಶ್ ಅವರನ್ನು ಕೆನರಾ ಬ್ಯಾಂಕಿಗೆ ಕರೆತಂದು ಹಣ ಡ್ರಾ ಮಾಡಿಕೊಡುವಂತೆ ಬಲವಂತ ಮಾಡಿದ್ದರು. ಈ ಸಂದರ್ಭ ಮಹೇಶ್ ಜೋರಾಗಿ ಬೊಬ್ಬೆ ಹಾಕಿದಾಗ, ಆರೋಪಿಗಳು ಮಹೇಶ್ ಬಳಿಯಿದ್ದ ₹ 1,99,500 ನಗದು, 2 ಮೊಬೈಲ್, ವಾಚ್, ಮಾರ್ಕ್ಸ್ ಕಾರ್ಡ್, ಕಂಪೆನಿ ಪರವಾನಗಿ, ಬೈಕ್ನ ಆರ್ಸಿ ಕಾರ್ಡ್, ಡಿಎಲ್, ಚೆಕ್, ಪಾಸ್ ಪುಸ್ತಕ ಹಾಗೂ ಇತರೆ ದಾಖಲೆಗಳಿದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>