<p><strong>ಉಡುಪಿ:</strong> ಪೊಲೀಸ್ ಕಮಿಷನರ್ ಹೆಸರಿನಲ್ಲಿ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಅನ್ಯರಾಜ್ಯದ ಮೂವರು ವ್ಯಕ್ತಿಗಳ ವಿರುದ್ಧ ಮಲ್ಪೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಸೋಮವಾರ ಮಲ್ಪೆ ಸರ್ಕಲ್ ಬಳಿ ಬಸ್ಗೆ ಅಡ್ಡಲಾಗಿ ನಿಲ್ಲಿಸಿದ್ದ ಕಾರನ್ನು ತೆಗೆಯಲು ಬಸ್ ಚಾಲಕ ಸೂಚಿಸಿದ್ದಕ್ಕೆ ಕೋಪಗೊಂಡ ಕಾರಿನಲ್ಲಿದ್ದ ರಾಘ ಸಂದೇಶ, ಶಿವಪ್ರಕಾಶ್, ಶಿವಕುಮಾರ್ ಎಂಬುವರು ಚಾಲಕನಿಗೆ ಬೆದರಿಕೆ ಹಾಕಿದ್ದಾರೆ. ಈ ಸಂದರ್ಭ ವಾಗ್ವಾದ ನಡೆದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಬೆದರಿಕೆ ಹಾಕಿದವರು ಪೊಲೀಸ್ ಅಧಿಕಾರಿಗಳಲ್ಲ ಎಂಬ ವಿಚಾರ ಬಯಲಾಗಿದೆ.</p>.<p>ಸಾರ್ವಜನಿಕರನ್ನು ವಂಚಿಸುವ ಉದ್ದೇಶದಿಂದ ಕಾರಿನ ಮುಂಭಾಗಕ್ಕೆ ‘ಪೊಲೀಸ್’ ಸ್ಟಿಕ್ಕರ್ ಅಂಟಿಸಿಕೊಂಡಿದ್ದಕ್ಕೆ ಹಾಗೂ ಬೆದರಿಕೆ ಹಾಕಿದ್ದಕ್ಕೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಆಂಧ್ರಪ್ರದೇಶ ಮೂಲದವರಾಗಿದ್ದು, ದೆಹಲಿಯಲ್ಲಿ ವಾಸವಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನೆಟ್ಹಟ್ಗೆ ನುಗ್ಗಿದ ಕಾರು</p>.<p>ಉಡುಪಿ: ಅಜ್ಜರಕಾಡು ಸಮೀಪದ ಎಲ್ಬಿಎಸ್ ರಸ್ತೆಯ ನೆಟ್ಹಟ್ ಟೆಕ್ನಾಲಜಿಸ್ ಮಳಿಗೆಗೆ ಕಾರು ನುಗ್ಗಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾಗಿದೆ.</p>.<p>ಮಂಗಳವಾರ ಕಾರು ಅಂಗಡಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ₹ 5 ಲಕ್ಷ ನಷ್ಟ ಸಂಭವಿಸಿದೆ ಎಂದು ಸುನೀಲ್ ರೊಬೆನ್ ಡಿಸೋಜ ಎಂಬುವರು ದೂರು ನೀಡಿದ್ದು, ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ವಾಹನ ಕಳವು</strong></p>.<p><strong>ಉಡುಪಿ: </strong>ನಗರದ ಮಂಜುನಾಥ ಕಣ್ಣಿನ ಆಸ್ಪತ್ರೆ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಅನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಧನುಷ್ ಶೆಟ್ಟಿ ವಾಹನ ಕಳೆದುಕೊಂಡವರು. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಪೊಲೀಸ್ ಕಮಿಷನರ್ ಹೆಸರಿನಲ್ಲಿ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಅನ್ಯರಾಜ್ಯದ ಮೂವರು ವ್ಯಕ್ತಿಗಳ ವಿರುದ್ಧ ಮಲ್ಪೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಸೋಮವಾರ ಮಲ್ಪೆ ಸರ್ಕಲ್ ಬಳಿ ಬಸ್ಗೆ ಅಡ್ಡಲಾಗಿ ನಿಲ್ಲಿಸಿದ್ದ ಕಾರನ್ನು ತೆಗೆಯಲು ಬಸ್ ಚಾಲಕ ಸೂಚಿಸಿದ್ದಕ್ಕೆ ಕೋಪಗೊಂಡ ಕಾರಿನಲ್ಲಿದ್ದ ರಾಘ ಸಂದೇಶ, ಶಿವಪ್ರಕಾಶ್, ಶಿವಕುಮಾರ್ ಎಂಬುವರು ಚಾಲಕನಿಗೆ ಬೆದರಿಕೆ ಹಾಕಿದ್ದಾರೆ. ಈ ಸಂದರ್ಭ ವಾಗ್ವಾದ ನಡೆದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಬೆದರಿಕೆ ಹಾಕಿದವರು ಪೊಲೀಸ್ ಅಧಿಕಾರಿಗಳಲ್ಲ ಎಂಬ ವಿಚಾರ ಬಯಲಾಗಿದೆ.</p>.<p>ಸಾರ್ವಜನಿಕರನ್ನು ವಂಚಿಸುವ ಉದ್ದೇಶದಿಂದ ಕಾರಿನ ಮುಂಭಾಗಕ್ಕೆ ‘ಪೊಲೀಸ್’ ಸ್ಟಿಕ್ಕರ್ ಅಂಟಿಸಿಕೊಂಡಿದ್ದಕ್ಕೆ ಹಾಗೂ ಬೆದರಿಕೆ ಹಾಕಿದ್ದಕ್ಕೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಆಂಧ್ರಪ್ರದೇಶ ಮೂಲದವರಾಗಿದ್ದು, ದೆಹಲಿಯಲ್ಲಿ ವಾಸವಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನೆಟ್ಹಟ್ಗೆ ನುಗ್ಗಿದ ಕಾರು</p>.<p>ಉಡುಪಿ: ಅಜ್ಜರಕಾಡು ಸಮೀಪದ ಎಲ್ಬಿಎಸ್ ರಸ್ತೆಯ ನೆಟ್ಹಟ್ ಟೆಕ್ನಾಲಜಿಸ್ ಮಳಿಗೆಗೆ ಕಾರು ನುಗ್ಗಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾಗಿದೆ.</p>.<p>ಮಂಗಳವಾರ ಕಾರು ಅಂಗಡಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ₹ 5 ಲಕ್ಷ ನಷ್ಟ ಸಂಭವಿಸಿದೆ ಎಂದು ಸುನೀಲ್ ರೊಬೆನ್ ಡಿಸೋಜ ಎಂಬುವರು ದೂರು ನೀಡಿದ್ದು, ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ವಾಹನ ಕಳವು</strong></p>.<p><strong>ಉಡುಪಿ: </strong>ನಗರದ ಮಂಜುನಾಥ ಕಣ್ಣಿನ ಆಸ್ಪತ್ರೆ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಅನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಧನುಷ್ ಶೆಟ್ಟಿ ವಾಹನ ಕಳೆದುಕೊಂಡವರು. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>