ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

Last Updated 7 ನವೆಂಬರ್ 2022, 7:33 IST
ಅಕ್ಷರ ಗಾತ್ರ

ಉಡುಪಿ: ಅ.19ರಂದು ಹಿರಿಯಡ್ಕದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯುತ್ತಿದ್ದ ಸಂದರ್ಭ ಬೆಂಗಾವಲು ಸಿಬ್ಬಂದಿಗೆ ಹಲ್ಲೆ ನಡೆಸಿ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ರಾಹಿಕ್‌ನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಆರೋಪಿ ರಾಹಿಕ್ ಬಂಧನಕ್ಕೆ ಕುಂದಾಪುರ ಇನ್‌ಸ್ಪೆಕ್ಟರ್ ಕೆ.ಆರ್.ಗೋಪಿಕೃಷ್ಣ ಮುಂದಾಳತ್ವದಲ್ಲಿ ಕುಂದಾಪುರ ಪಿಎಸ್‌ಐ ಸದಾಶಿವ ಗವರೋಜಿ, ಕೆ.ಪ್ರಸಾದ್‌ ನೇತೃತ್ವದಲ್ಲಿ 2 ತಂಡಗಳನ್ನು ರಚಿಸಲಾಗಿತ್ತು.

ಆರೋಪಿಯ ಸುಳಿವು ಪತ್ತೆಹಚ್ಚಿದ ತಂಡ ಮುಂಬೈನ ಲೋನಾವಾಲದ ಹೋಟೆಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಾನುವಾರ ಕುಂದಾಪುರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ರಾಹಿಕ್ ಮುಂಬೈನಲ್ಲಿಯೂ ಕಳವು ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ತಿಳಿಸಿದ್ದಾರೆ.

ತನಿಖಾ ತಂಡದಲ್ಲಿ ಸಿಬ್ಬಂದಿ ಸಂತೋಷ್ ಕುಮಾರ್, ಸಂತೋಷ್‌, ಸಿದ್ದಪ್ಪ, ಗಂಗೊಳ್ಳಿ ಠಾಣೆಯ ಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT