ಉಡುಪಿ: ಅಂಬಾಗಿಲು ಕಕ್ಕುಂಜೆಯಲ್ಲಿ ಈಚೆಗೆ ಪ್ರಮಿಳಾ ಬಂಗೇರಾ ಎಂಬುವರ ನಿವಾಸದಿಂದ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಸಂತೋಷ್ ಪೂಜಾರಿಯನ್ನು ಕೃಷ್ಣ ಮಠದ ಗೀತಾ ಮಂದಿರ ಬಳಿ ಹಾಗೂ ರಾಕೇಶ್ ಪಾಲನ್ನನ್ನು ಉಜ್ವಲ್ ಬಾರ್ ಬಳಿ ವಶಕ್ಕೆ ಪಡೆದು ₹ 2,18,169 ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜನವರಿಯಲ್ಲಿ ಪ್ರಮಿಳಾ ಬಂಗೇರಾ ಅವರ ನಿವಾಸಕ್ಕೆ ನುಗ್ಗಿದ ಕಳ್ಳರು ಎರಡು ಬಂಗಾರದ ಸರ, ಬಳೆಗಳು, ಉಂಗುರಗಳು, ಕಿವಿಯ ಓಲೆ, ಬ್ರೆಸ್ಲೆಟ್ ಸೇರಿ 9 ಪವನ್ ಚಿನ್ನಾಭರಣ ಕಳವು ಮಾಡಿದ್ದರು. ಕಳುವಾದ ಸ್ವತ್ತುಗಳ ಮೌಲ್ಯ ₹ 3,15,000 ಎಂದು ಅಂದಾಜಿಸಲಾಗಿತ್ತು.
ಇನ್ಸ್ಪೆಕ್ಟರ್ ಪ್ರಮೋದ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್ಐ ಪ್ರಸಾದ್ ಕುಮಾರ್, ಟಿ.ಎಂ.ಮಹೇಶ್, ವಾಸಪ್ಪ ನಾಯ್ಕ್ ಹಾಗೂ ಎಎಸ್ಐ ಅರುಣ್, ಸಿಬ್ಬಂದಿ ಸತೀಶ್ ಬೆಳ್ಳೆ, ಕಿರಣ್ ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು ಎಂದು ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.