ಜಿಲ್ಲೆಯಲ್ಲಿ ಹಸಿವಿನಿಂದ ಬಳಲುತ್ತಿರುವವರಿಗೆ ವಸತಿ ಮತ್ತು ಊಟೋಪಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ತಗುಲುವ ವೆಚ್ಚವನ್ನು ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಯಡಿ ಬರುವ ಅಂಬಲಪಾಡಿಯ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನ, ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನ, ದುರ್ಗಾ ಪರಮೇಶ್ವರಿ ದೇವಸ್ಥಾನ ಮಂದಾರ್ತಿ, ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು, ದುರ್ಗಾ ಪರಮೇಶ್ವರಿ ದೇವಸ್ಥಾನ ಮುಂಡ್ಕೂರು, ಅನಂತ ಪದ್ಮನಾಭ ಮತ್ತು ಅರ್ಧ ನಾರೀಶ್ವರ ದೇವಸ್ಥಾನ ಹೆಬ್ರಿ ದೇವಾಲಯಗಳ ನಿಧಿಯಿಂದ ಭರಿಸಬೇಕು.