<p><strong>ಅಫಜಲಪುರ (ಕಲಬುರಗಿ ಜಿಲ್ಲೆ), ಉಡುಪಿ</strong> <strong>:</strong> ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ರೂಸರ್(ತೂಫಾನ್) ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸದ ಭೀಕರ ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ತಾಲ್ಲೂಕಿನ ದೇವಲ ಗಾಣಗಾಪುರದ ಚೇತನ್ ಮಾದರ(18) ಮತ್ತು ರೋಹಿದಾಸ್ ಮಾದರ (19) ಹಾಗೂ ಮಲ್ಲಮ್ಮ (45) ಅದರಂತೆ ಚಾಲಕ ಮಾನಪ್ಪ (30) ಎಂಬವರು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.</p><p>ಅಪಘಾತದಲ್ಲಿ ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ.</p><p>ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು. </p><p>ಶನಿವಾರ ಸಂಜೆ ಕಾರ್ಕಳದಿಂದ ಕ್ರೂಸರ್ ಮೂಲಕ ಉಡುಪಿಗೆ ಸಂಚರಿಸುವ ಮಧ್ಯದ ಕಾರ್ಕಳ ಹತ್ತಿರ ಬಸ್ಸಿಗೆ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.</p><p>ದುರ್ಘಟನೆಯಲ್ಲಿ ಇನ್ನುಳಿದ 9 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p><p>ಸಂಗೀತ ಎಂಬವರಿಗೆ ಒಂದು ಕೈ ಮತ್ತು ಕಾಲು ಕಟ್ಟಾಗಿದೆ ಎಂದು ತಿಳಿದ ಬಂದಿದೆ. ಅವಘಡದ ಮಾಹಿತಿ ದೊರೆತ ಬೆನ್ನಲ್ಲೆ ಗಾಣಗಾಪುರದ ಮೃತರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.</p><p>ಈ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ (ಕಲಬುರಗಿ ಜಿಲ್ಲೆ), ಉಡುಪಿ</strong> <strong>:</strong> ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ರೂಸರ್(ತೂಫಾನ್) ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸದ ಭೀಕರ ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ತಾಲ್ಲೂಕಿನ ದೇವಲ ಗಾಣಗಾಪುರದ ಚೇತನ್ ಮಾದರ(18) ಮತ್ತು ರೋಹಿದಾಸ್ ಮಾದರ (19) ಹಾಗೂ ಮಲ್ಲಮ್ಮ (45) ಅದರಂತೆ ಚಾಲಕ ಮಾನಪ್ಪ (30) ಎಂಬವರು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.</p><p>ಅಪಘಾತದಲ್ಲಿ ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ.</p><p>ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು. </p><p>ಶನಿವಾರ ಸಂಜೆ ಕಾರ್ಕಳದಿಂದ ಕ್ರೂಸರ್ ಮೂಲಕ ಉಡುಪಿಗೆ ಸಂಚರಿಸುವ ಮಧ್ಯದ ಕಾರ್ಕಳ ಹತ್ತಿರ ಬಸ್ಸಿಗೆ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.</p><p>ದುರ್ಘಟನೆಯಲ್ಲಿ ಇನ್ನುಳಿದ 9 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.</p><p>ಸಂಗೀತ ಎಂಬವರಿಗೆ ಒಂದು ಕೈ ಮತ್ತು ಕಾಲು ಕಟ್ಟಾಗಿದೆ ಎಂದು ತಿಳಿದ ಬಂದಿದೆ. ಅವಘಡದ ಮಾಹಿತಿ ದೊರೆತ ಬೆನ್ನಲ್ಲೆ ಗಾಣಗಾಪುರದ ಮೃತರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.</p><p>ಈ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>