ನಗರದಲ್ಲಿ ಮಂಗಳವಾರ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರು ಕೋವಿಡ್ ಲಸಿಕೆ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಆದರೆ, ಕೆಲವು ಪಕ್ಷಗಳಿಗೆ ವಿಶ್ವಾಸವಿಲ್ಲ. ಅಂಥವರನ್ನು ಜನರು ದೇಶದ ರಾಜಕಾರಣದಿಂದ ಅಳಿಸಿ ಹಾಕಲಿದ್ದಾರೆ. ದೇಶದಲ್ಲಿ ಲಸಿಕೆ ತಯಾರಾದರೆ ಅವರಿಗೆ ನಂಬಿಕೆ ಬರುತ್ತಿಲ್ಲ. ದೇಶದ ವಿಜ್ಞಾನಿಗಳ ಮೇಲೆಯೂ ವಿಶ್ವಾಸವಿಲ್ಲ. ಲಸಿಕೆ ಇಟಲಿಯಿಂದ ಬಂದಿದ್ದರೆ, ಉತ್ತಮ ಲಸಿಕೆ ಎಂದು ಪ್ರಮಾಣಪತ್ರ ಕೊಡುತ್ತಿದ್ದರು ಎಂದು ಪಕ್ಷದ ಹೆಸರೇಳದೆ ವಾಗ್ದಾಳಿ ನಡೆಸಿದರು.