<p><strong>ಉಡುಪಿ:</strong> ಜಿಲ್ಲೆಯಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈಚೆಗೆ ನ್ಯಾಪ್ಟಾಲ್ ಕಂಪೆನಿ ಹೆಸರಿನಲ್ಲಿ ವಂಚಕರು ಕೆ.ನಾಗರಾಜ ಭಟ್ ಅವರಿಗೆ ₹ 26,47,650 ವಂಚಿಸಿದ್ದಾರೆ.</p>.<p><strong>ವಂಚನೆ ನಡೆದಿದ್ದು ಹೇಗೆ?</strong></p>.<p>ಮಾರ್ಚ್ 29, 2019ರಲ್ಲಿ ನಾಗರಾಜ್ ಭಟ್ ಅವರ ವಿಳಾಸಕ್ಕೆ ನ್ಯಾಪ್ಟಾಲ್ ಕಂಪೆನಿಯ ಹೆಸರಿನಲ್ಲಿ ಸ್ಕ್ರಾಚ್ ಕೂಪನ್ ಬಂದಿತ್ತು. ಅದರಲ್ಲಿ ₹ 12 ಲಕ್ಷ ಬಹುಮಾನ ಗೆದ್ದಿರುವುದಾಗಿ ತಿಳಿಸಲಾಗಿತ್ತು. ಬಳಿಕ ನಾಗರಾಜ್ ಭಟ್ ಪತ್ರದಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ,ಬಹುಮಾನದ ಹಣ ಪಡೆಯಬೇಕಾದರೆ ನೋಂದಣಿ ಶುಲ್ಕ ಪಾವತಿಸುವಂತೆ ತಿಳಿಸಿದ ವಂಚಕರು ₹ 12,000 ನಗದನ್ನು ಖಾತೆಗೆ ಹಾಕಿಸಿಕೊಂಡಿದ್ದರು.</p>.<p>ಬಳಿಕ ಆರೋಪಿಗಳಾದ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಬೇರೆ ಬೇರೆ ಮೊಬೈಲ್ ನಂಬರ್ಗಳಿಂದ ಕರೆಮಾಡಿ ಜಿಎಸ್ಟಿ, ತೆರಿಗೆ, ಪರಿಷ್ಕರಣ ಶುಲ್ಕ ಹೀಗೆ ಏ.4, 2019ರಿಂದ ಇಲ್ಲಿಯವರೆಗೂ ವಿವಿಧ ಬ್ಯಾಂಕ್ ಖಾತೆಗಳಿಗೆ ₹ 26,47,650 ಜಮೆ ಮಾಡಿಸಿಕೊಂಡಿದ್ದಾರೆ. ಕೊನೆಗೆ, ನಾಗರಾಜ್ ಭಟ್ ಅವರಿಗೆ ಮೋಸ ಹೋಗಿರುವುದು ಅರಿವಾಗಿ ಸೆನ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜಿಲ್ಲೆಯಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈಚೆಗೆ ನ್ಯಾಪ್ಟಾಲ್ ಕಂಪೆನಿ ಹೆಸರಿನಲ್ಲಿ ವಂಚಕರು ಕೆ.ನಾಗರಾಜ ಭಟ್ ಅವರಿಗೆ ₹ 26,47,650 ವಂಚಿಸಿದ್ದಾರೆ.</p>.<p><strong>ವಂಚನೆ ನಡೆದಿದ್ದು ಹೇಗೆ?</strong></p>.<p>ಮಾರ್ಚ್ 29, 2019ರಲ್ಲಿ ನಾಗರಾಜ್ ಭಟ್ ಅವರ ವಿಳಾಸಕ್ಕೆ ನ್ಯಾಪ್ಟಾಲ್ ಕಂಪೆನಿಯ ಹೆಸರಿನಲ್ಲಿ ಸ್ಕ್ರಾಚ್ ಕೂಪನ್ ಬಂದಿತ್ತು. ಅದರಲ್ಲಿ ₹ 12 ಲಕ್ಷ ಬಹುಮಾನ ಗೆದ್ದಿರುವುದಾಗಿ ತಿಳಿಸಲಾಗಿತ್ತು. ಬಳಿಕ ನಾಗರಾಜ್ ಭಟ್ ಪತ್ರದಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ,ಬಹುಮಾನದ ಹಣ ಪಡೆಯಬೇಕಾದರೆ ನೋಂದಣಿ ಶುಲ್ಕ ಪಾವತಿಸುವಂತೆ ತಿಳಿಸಿದ ವಂಚಕರು ₹ 12,000 ನಗದನ್ನು ಖಾತೆಗೆ ಹಾಕಿಸಿಕೊಂಡಿದ್ದರು.</p>.<p>ಬಳಿಕ ಆರೋಪಿಗಳಾದ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಬೇರೆ ಬೇರೆ ಮೊಬೈಲ್ ನಂಬರ್ಗಳಿಂದ ಕರೆಮಾಡಿ ಜಿಎಸ್ಟಿ, ತೆರಿಗೆ, ಪರಿಷ್ಕರಣ ಶುಲ್ಕ ಹೀಗೆ ಏ.4, 2019ರಿಂದ ಇಲ್ಲಿಯವರೆಗೂ ವಿವಿಧ ಬ್ಯಾಂಕ್ ಖಾತೆಗಳಿಗೆ ₹ 26,47,650 ಜಮೆ ಮಾಡಿಸಿಕೊಂಡಿದ್ದಾರೆ. ಕೊನೆಗೆ, ನಾಗರಾಜ್ ಭಟ್ ಅವರಿಗೆ ಮೋಸ ಹೋಗಿರುವುದು ಅರಿವಾಗಿ ಸೆನ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>