ಬಳಿಕ ಆರೋಪಿಗಳಾದ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಬೇರೆ ಬೇರೆ ಮೊಬೈಲ್ ನಂಬರ್ಗಳಿಂದ ಕರೆಮಾಡಿ ಜಿಎಸ್ಟಿ, ತೆರಿಗೆ, ಪರಿಷ್ಕರಣ ಶುಲ್ಕ ಹೀಗೆ ಏ.4, 2019ರಿಂದ ಇಲ್ಲಿಯವರೆಗೂ ವಿವಿಧ ಬ್ಯಾಂಕ್ ಖಾತೆಗಳಿಗೆ ₹ 26,47,650 ಜಮೆ ಮಾಡಿಸಿಕೊಂಡಿದ್ದಾರೆ. ಕೊನೆಗೆ, ನಾಗರಾಜ್ ಭಟ್ ಅವರಿಗೆ ಮೋಸ ಹೋಗಿರುವುದು ಅರಿವಾಗಿ ಸೆನ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.