ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮ ವಹಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಕೋಪವನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಮೀನುಗಾರರು ನದಿ, ಸಮುದ್ರಕ್ಕೆ ಇಳಿಯಬಾರದು. ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ನಿಲ್ಲಬಾರದು.