ಒಂದು ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿಗೆ ₹ 18,000 ಪರಿಹಾರ ನೀಡಬೇಕು ಎಂಬ ನಿಯಮವಿದ್ದು, ಇದಕ್ಕೆ ರೈತರಿಂದ ವಿರೋಧ ವ್ಯಕ್ತವಾಗಿದೆ. ಹಾಗಾಗಿ, ಭೂಸ್ವಾಧೀನ ಪ್ರಕ್ರಿಯೆ ಮಾಡುವಾಗ ಒಂದು ಅಡಿಕೆ ಮರಕ್ಕೆ ₹3,000, ಒಂದು ತೆಂಗಿಗೆ ₹13,000 ಕೊಡಲಾಗುತ್ತದೆ. ಅದರಂತೆಯೇ ಪರಿಹಾರ ವಿತರಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ತೋಟಗಾರಿಕಾ ಬೆಳೆ ನಾಶದ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೋಟ ತಿಳಿಸಿದರು.