ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಭಗವಂತ ಕಟ್ಟಿಮನಿ ಮಾತನಾಡಿ, ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಸುಧಾರಣೆಯಾಗಬೇಕು. ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ 105 ಕಾಲೇಜುಗಳಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಬರುವ ಬಗ್ಗೆ ಗಮನಹರಿಸಬೇಕು ಎಂದರು.