ಪರ್ಕಳ ಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತಿದ್ದು, ರಸ್ತೆ ವಿಸ್ತರಣೆ ಅತ್ಯಂತ ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಿಂದ ಈಗಾಗಲೇ ರಸ್ತೆ ವಿಸ್ತರಣೆಗೆ ಅನುಮತಿ ಸಿಕ್ಕಿದ್ದು, ಏ.11 ರಿಂದ ಕಾಮಗಾರಿ ಆರಂಭಿಸಲಾಗುವುದು. ರಸ್ತೆ ವಿಸ್ತರಣೆಯಿಂದ ಕಟ್ಟಡ ಸಾಮಗ್ರಿಗಳು, ಮರಮುಟ್ಟುಗಳಿಗೆ ಹಾನಿಯಾಗಲಿದ್ದು, ಕೂಡಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳಬೇಕು.ಅವಶ್ಯಕತೆ ಇದ್ದಲ್ಲಿ ಸ್ಥಳಾಂತರ ಕಾರ್ಯಕ್ಕೆ ಅಗತ್ಯ ನೆರವು ಒದಗಿಸಲಾಗುವುದು ಎಂದು ಡಿಸಿ ಹೇಳಿದರು.