<p><strong>ಉಡುಪಿ: </strong>ಹೊರ ರಾಜ್ಯಗಳಿಂದ ಬಂದವರು ಕ್ವಾರಂಟೈನ್ಗೆ ತೆರಳುವ ಮುನ್ನ ತಪ್ಪು ವಿಳಾಸ, ದೂರವಾಣಿ ಸಂಖ್ಯೆ ನೀಡಿದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.</p>.<p>ಹೊರ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆ್ಯಪ್ನಲ್ಲಿ ನೊಂದಣಿ ಮಾಡಿಕೊಂಡಿರಬೇಕು. ರಸ್ತೆ ಮಾರ್ಗವಾಗಿ ಬರುವವರು ಗಡಿಯಲ್ಲಿ ಸ್ವೀಕಾರ ಕೇಂದ್ರದಲ್ಲಿಲ್ಲಿ ಹಾಜರಾಗಿ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಿ ಕ್ವಾರಂಟೈನ್ಗೆ ಒಳಪಡಬೇಕು. ಮಹಾರಾಷ್ಟ್ರದಿಂದ ಆಗಮಿಸುವವರು 7 ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಹೋಂ ಕ್ವಾರಂಟೈನ್ಗೆ ಒಳಪಡಬೇಕು. ಇತರೆ ರಾಜ್ಯಗಳಿಂದ ಬರುವವರು 14 ದಿನಗಳ ಹೋಂ ಕ್ವಾರಂಟೈನ್ಗೆ ಒಳಪಡಬೇಕು.</p>.<p>ರೈಲಿನಲ್ಲಿ ಬರುವವರು ನಿಲ್ದಾಣಗಳಲ್ಲಿನ ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ವಿಳಾಸ ಮತ್ತು ದೂರವಾಣಿ ಸಂಖ್ಯೆ ನೋಂದಾಯಿಸಬೇಕು. ವಿಳಾಸದ ಸ್ಥಳಕ್ಕೆ ತೆರಳದೆ ಮಾರ್ಗಮಧ್ಯೆ ತಪ್ಪಿಸಿಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ವಂತ ಖರ್ಚಿನಲ್ಲಿ ತೆರಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<p>ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ನೋಂದಣಿಯಾದ ಎಲ್ಲರಿಗೂ ಸೀಲ್ ಹಾಕಿ, ಸಂಬoದಪಟ್ಟ ತಾಲ್ಲೂಕಿನ ಗ್ರಾಮಗಳಿಗೆ ಕಳುಹಿಸಲಾಗುವುದು ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ, ಗ್ರಾಮ ಪಂಚಾಯಿತಿಗಳಲ್ಲಿನ ಕ್ವಾರಂಟೈನ್ ಕೇಂದ್ರಗಳಿಗೆ ಊಟೋಪಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು. ನಿತ್ಯ ಪರಿಶೀಲಿಸಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.</p>.<p>ಹೊರರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಆರೋಗ್ಯ ಸೇತು, ಕ್ವಾರಂಟೈನ್ ವಾಚ್ ಮತ್ತು ಆಪ್ತಮಿತ್ರ ಅಪ್ಲಿಕೇಷನ್ಗಳನ್ನು ಡೌನ್ಲೋಡ್ ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಹೊರ ರಾಜ್ಯಗಳಿಂದ ಬಂದವರು ಕ್ವಾರಂಟೈನ್ಗೆ ತೆರಳುವ ಮುನ್ನ ತಪ್ಪು ವಿಳಾಸ, ದೂರವಾಣಿ ಸಂಖ್ಯೆ ನೀಡಿದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.</p>.<p>ಹೊರ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆ್ಯಪ್ನಲ್ಲಿ ನೊಂದಣಿ ಮಾಡಿಕೊಂಡಿರಬೇಕು. ರಸ್ತೆ ಮಾರ್ಗವಾಗಿ ಬರುವವರು ಗಡಿಯಲ್ಲಿ ಸ್ವೀಕಾರ ಕೇಂದ್ರದಲ್ಲಿಲ್ಲಿ ಹಾಜರಾಗಿ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಿ ಕ್ವಾರಂಟೈನ್ಗೆ ಒಳಪಡಬೇಕು. ಮಹಾರಾಷ್ಟ್ರದಿಂದ ಆಗಮಿಸುವವರು 7 ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಹೋಂ ಕ್ವಾರಂಟೈನ್ಗೆ ಒಳಪಡಬೇಕು. ಇತರೆ ರಾಜ್ಯಗಳಿಂದ ಬರುವವರು 14 ದಿನಗಳ ಹೋಂ ಕ್ವಾರಂಟೈನ್ಗೆ ಒಳಪಡಬೇಕು.</p>.<p>ರೈಲಿನಲ್ಲಿ ಬರುವವರು ನಿಲ್ದಾಣಗಳಲ್ಲಿನ ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ವಿಳಾಸ ಮತ್ತು ದೂರವಾಣಿ ಸಂಖ್ಯೆ ನೋಂದಾಯಿಸಬೇಕು. ವಿಳಾಸದ ಸ್ಥಳಕ್ಕೆ ತೆರಳದೆ ಮಾರ್ಗಮಧ್ಯೆ ತಪ್ಪಿಸಿಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ವಂತ ಖರ್ಚಿನಲ್ಲಿ ತೆರಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<p>ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ನೋಂದಣಿಯಾದ ಎಲ್ಲರಿಗೂ ಸೀಲ್ ಹಾಕಿ, ಸಂಬoದಪಟ್ಟ ತಾಲ್ಲೂಕಿನ ಗ್ರಾಮಗಳಿಗೆ ಕಳುಹಿಸಲಾಗುವುದು ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ, ಗ್ರಾಮ ಪಂಚಾಯಿತಿಗಳಲ್ಲಿನ ಕ್ವಾರಂಟೈನ್ ಕೇಂದ್ರಗಳಿಗೆ ಊಟೋಪಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು. ನಿತ್ಯ ಪರಿಶೀಲಿಸಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.</p>.<p>ಹೊರರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಆರೋಗ್ಯ ಸೇತು, ಕ್ವಾರಂಟೈನ್ ವಾಚ್ ಮತ್ತು ಆಪ್ತಮಿತ್ರ ಅಪ್ಲಿಕೇಷನ್ಗಳನ್ನು ಡೌನ್ಲೋಡ್ ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>