<p><strong>ಉಡುಪಿ: </strong>ಸರ್ಕಾರಕ್ಕೆ ಬರುವ ಅಬಕಾರಿ ಆದಾಯ ನಿಂತರೂ ಪರವಾಗಿಲ್ಲ; ಆರೋಗ್ಯದ ಹಿತದೃಷ್ಟಿಯಿಂದ ಮದ್ಯಪಾನ ಸೇವನೆಯನ್ನು ನಿಲ್ಲಿಸಿ ಎಂದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಕಿವಿಮಾತು ಹೇಳಿದರು.</p>.<p>ಡಾ.ಎ.ವಿ.ಬಾಳಿಗಾ ಮೆಮೊರಿಯಲ್ ಆಸ್ಪತ್ರೆಯಲ್ಲಿ ಬುಧವಾರ ನಡೆದ 28ನೇ ಮದ್ಯವರ್ಜನೆ ಶಿಬಿರದಲ್ಲಿ ಮಾತನಾಡಿದ ಅವರು,ಸರ್ಕಾರದ ಬೊಕ್ಕಸಕ್ಕೆ ಪ್ರತಿವರ್ಷ ₹ 23,000 ಕೋಟಿ ಅಬಕಾರಿ ಆದಾಯ ಬರುತ್ತಿದೆ. ಜಿಲ್ಲೆಯಿಂದ ₹ 1,000 ಕೋಟಿ ಆದಾಯ ಹೋಗುತ್ತಿದೆ. ಈ ಹಣ ಅಭಿವೃದ್ಧಿಗೆ ಬಳಕೆಯಾದರೆ ಜಿಲ್ಲೆಯ ಆರ್ಥಿಕ ಚಿತ್ರಣವೇ ಬದಲಾಗಲಿದೆ ಎಂದರು.</p>.<p>‘ರಾಜ್ಯ ಸರ್ಕಾರದ ಬಜೆಟ್ ಗಾತ್ರ ₹ 2 ಲಕ್ಷ ಕೋಟಿಯಷ್ಟಿದ್ದು, ಅಬಕಾರಿ ಆದಾಯ ನಿಂತರೂ ಸರ್ಕಾರ ಇತರೆ ಮೂಲಗಳಿಂದ ತೆರಿಗೆ ಸಂಗ್ರಹಿಸಿ ರಾಜ್ಯವನ್ನು ಮುನ್ನಡೆಸುತ್ತದೆ. ಆದರೆ, ಮದ್ಯಪಾನ ಮಾಡುವುದು ಬೇಡ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>‘ಮದ್ಯದಂಗಡಿಗಗಳಿಗೆ ಪರವಾನಗಿ, ಮದ್ಯ ಮಾರಾಟ ಗುರಿ ನಿಗಧಿ ಸೇರಿದಂತೆ ಅಬಕಾರಿ ಇಲಾಖೆಗೆ ಸಂಬಂಧಿದ ವಿಚಾರಗಳು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಆರೋಗ್ಯದ ದೃಷ್ಟಿಯಿಂದ ಮದ್ಯ ಮಾರಾಟ ಗುರಿಯನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸುತ್ತೇನೆ’ ಎಂದರು.</p>.<p>ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ವಿಶ್ವದೆಲ್ಲೆಡೆ ಪ್ರತಿ ನಿಮಿಷಕ್ಕೆ 6 ಮದ್ಯಪಾನಿಗಳು ಮೃತಪಡುತ್ತಿದ್ದಾರೆ. ಶೇ 18ರಷ್ಟು ಆತ್ಮಹತ್ಯೆಗಳಿಗೆ, ಶೇ 13ರಷ್ಟು ಮೂರ್ಚೆ ರೋಗಗಳಿಗೆ, ಶೇ 27ರಷ್ಟು ಅಪಘಾತಗಳಿಗೆ, ಶೇ 18ರಷ್ಟು ದೊಂಬಿ ಗಲಾಟೆಗಳಿಗೆ ಮದ್ಯಪಾನ ಕಾರಣವಾಗಿದೆ ಎಂದು ಸಂಶೋಧನೆ ಹೇಳುತ್ತಿದೆ ಎಂದುಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದರು.</p>.<p>ಇಷ್ಟಾದರೂ ಜನರು ಸರ್ವರೋಗಕ್ಕೆ ಸಾರಾಯಿ ಮದ್ದು ಎಂದು ಸೇವಿಸುತ್ತಲೇ ಇದ್ದಾರೆ. ಒಂದು ಹನಿ ಮದ್ಯವೂ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಮದ್ಯ ಸೇವನೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಗಳನ್ನು ತುಂಬಲಾಗುತ್ತಿದೆ. ಮದ್ಯ ಸೇವನೆ ಅಪಾಯಗಳ ವಿರುದ್ಧ ಅರಿವು ಮೂಡಿಸಬೇಕಿದೆ ಎಂದರು.</p>.<p>ಮದ್ಯಪಾನ ಬಿಟ್ಟವರು ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸುತ್ತಿದ್ದಾರೆ. ಜತೆಗೆ, ಮದ್ಯಪಾನ ತ್ಯಜಿಸುವ ಕುರಿತು ಸಮಾಜದಲ್ಲಿ ಅರಿವು ಮೂಡಿಸುತ್ತಿದ್ದಾರೆ. ಇದು ಸಮಾಜಕ್ಕೆ ಪ್ರೇರಣದಾಯಕ ಎಂದರು.</p>.<p>ಕಾರ್ಯಕ್ರಮದಲ್ಲಿ ಡಾ.ವಿರೂಪಾಕ್ಷ ದೇವರಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಸರ್ಕಾರಕ್ಕೆ ಬರುವ ಅಬಕಾರಿ ಆದಾಯ ನಿಂತರೂ ಪರವಾಗಿಲ್ಲ; ಆರೋಗ್ಯದ ಹಿತದೃಷ್ಟಿಯಿಂದ ಮದ್ಯಪಾನ ಸೇವನೆಯನ್ನು ನಿಲ್ಲಿಸಿ ಎಂದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಕಿವಿಮಾತು ಹೇಳಿದರು.</p>.<p>ಡಾ.ಎ.ವಿ.ಬಾಳಿಗಾ ಮೆಮೊರಿಯಲ್ ಆಸ್ಪತ್ರೆಯಲ್ಲಿ ಬುಧವಾರ ನಡೆದ 28ನೇ ಮದ್ಯವರ್ಜನೆ ಶಿಬಿರದಲ್ಲಿ ಮಾತನಾಡಿದ ಅವರು,ಸರ್ಕಾರದ ಬೊಕ್ಕಸಕ್ಕೆ ಪ್ರತಿವರ್ಷ ₹ 23,000 ಕೋಟಿ ಅಬಕಾರಿ ಆದಾಯ ಬರುತ್ತಿದೆ. ಜಿಲ್ಲೆಯಿಂದ ₹ 1,000 ಕೋಟಿ ಆದಾಯ ಹೋಗುತ್ತಿದೆ. ಈ ಹಣ ಅಭಿವೃದ್ಧಿಗೆ ಬಳಕೆಯಾದರೆ ಜಿಲ್ಲೆಯ ಆರ್ಥಿಕ ಚಿತ್ರಣವೇ ಬದಲಾಗಲಿದೆ ಎಂದರು.</p>.<p>‘ರಾಜ್ಯ ಸರ್ಕಾರದ ಬಜೆಟ್ ಗಾತ್ರ ₹ 2 ಲಕ್ಷ ಕೋಟಿಯಷ್ಟಿದ್ದು, ಅಬಕಾರಿ ಆದಾಯ ನಿಂತರೂ ಸರ್ಕಾರ ಇತರೆ ಮೂಲಗಳಿಂದ ತೆರಿಗೆ ಸಂಗ್ರಹಿಸಿ ರಾಜ್ಯವನ್ನು ಮುನ್ನಡೆಸುತ್ತದೆ. ಆದರೆ, ಮದ್ಯಪಾನ ಮಾಡುವುದು ಬೇಡ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>‘ಮದ್ಯದಂಗಡಿಗಗಳಿಗೆ ಪರವಾನಗಿ, ಮದ್ಯ ಮಾರಾಟ ಗುರಿ ನಿಗಧಿ ಸೇರಿದಂತೆ ಅಬಕಾರಿ ಇಲಾಖೆಗೆ ಸಂಬಂಧಿದ ವಿಚಾರಗಳು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಆರೋಗ್ಯದ ದೃಷ್ಟಿಯಿಂದ ಮದ್ಯ ಮಾರಾಟ ಗುರಿಯನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸುತ್ತೇನೆ’ ಎಂದರು.</p>.<p>ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ವಿಶ್ವದೆಲ್ಲೆಡೆ ಪ್ರತಿ ನಿಮಿಷಕ್ಕೆ 6 ಮದ್ಯಪಾನಿಗಳು ಮೃತಪಡುತ್ತಿದ್ದಾರೆ. ಶೇ 18ರಷ್ಟು ಆತ್ಮಹತ್ಯೆಗಳಿಗೆ, ಶೇ 13ರಷ್ಟು ಮೂರ್ಚೆ ರೋಗಗಳಿಗೆ, ಶೇ 27ರಷ್ಟು ಅಪಘಾತಗಳಿಗೆ, ಶೇ 18ರಷ್ಟು ದೊಂಬಿ ಗಲಾಟೆಗಳಿಗೆ ಮದ್ಯಪಾನ ಕಾರಣವಾಗಿದೆ ಎಂದು ಸಂಶೋಧನೆ ಹೇಳುತ್ತಿದೆ ಎಂದುಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದರು.</p>.<p>ಇಷ್ಟಾದರೂ ಜನರು ಸರ್ವರೋಗಕ್ಕೆ ಸಾರಾಯಿ ಮದ್ದು ಎಂದು ಸೇವಿಸುತ್ತಲೇ ಇದ್ದಾರೆ. ಒಂದು ಹನಿ ಮದ್ಯವೂ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಮದ್ಯ ಸೇವನೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಗಳನ್ನು ತುಂಬಲಾಗುತ್ತಿದೆ. ಮದ್ಯ ಸೇವನೆ ಅಪಾಯಗಳ ವಿರುದ್ಧ ಅರಿವು ಮೂಡಿಸಬೇಕಿದೆ ಎಂದರು.</p>.<p>ಮದ್ಯಪಾನ ಬಿಟ್ಟವರು ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸುತ್ತಿದ್ದಾರೆ. ಜತೆಗೆ, ಮದ್ಯಪಾನ ತ್ಯಜಿಸುವ ಕುರಿತು ಸಮಾಜದಲ್ಲಿ ಅರಿವು ಮೂಡಿಸುತ್ತಿದ್ದಾರೆ. ಇದು ಸಮಾಜಕ್ಕೆ ಪ್ರೇರಣದಾಯಕ ಎಂದರು.</p>.<p>ಕಾರ್ಯಕ್ರಮದಲ್ಲಿ ಡಾ.ವಿರೂಪಾಕ್ಷ ದೇವರಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>