ಉಡುಪಿ: ಕಲ್ಯಾಣಪುರ ಸೇತುವೆಯಿಂದ ಸ್ವರ್ಣ ನದಿಗೆ ಹಾರಿದ್ದ ಯುವಕನ ಮೃತದೇಹ ಸೋಮವಾರ ಪತ್ತೆಯಾಗಿದೆ.
ಬನ್ನಂಜೆಯ ದೀಕ್ಷಿತ್ ಶೆಟ್ಟಿ (26) ಮೃತ ಯುವಕ. ಭಾನುವಾರ ರಾತ್ರಿ ಸೇತುವೆ ಪಕ್ಕದಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಿ, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ. ನದಿಗೆ ಹಾರಿರಬಹುದು ಎಂಬ ಶಂಕೆಯಿಂದ ದೋಣಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಸಂಜೆ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.