<p><strong>ಉಡುಪಿ:</strong>ಜಿಲ್ಲೆಯ ಸ್ವ–ಸಹಾಯ ಸಂಘಗಳು ಸಾಲ ಮರುಪಾವತಿ ಮಾಡುವಲ್ಲಿ ಮೂಂಚೂಣಿ ಸ್ಥಾನದಲ್ಲಿದೆ ಎಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನರ್ಬಾಡ್ ಎಜಿಎಂ ಎಸ್.ರಮೇಶ್ ತಿಳಿಸಿದರು.</p>.<p>ಕರ್ನಾಟಕ ಕಿರು ಹಣಕಾಸು ಸಂಸ್ಥೆಗಳ ಒಕ್ಕೂಟ ಬೆಂಗಳೂರು ಆಶ್ರಯದಲ್ಲಿ ಗುರುವಾರ ಪ್ರಗತಿಸೌಧದಲ್ಲಿ ಆಯೋಜಿಸಿದ್ದ ಕಿರು ಹಣಕಾಸು ವ್ಯವಹಾರ ಮಾಡುತ್ತಿರುವ ಪಾಲುದಾರರಿಗೆ ಹಣಕಾಸು ನಿರ್ವಹಣೆಯ ಕಾರ್ಯಾಗಾರ ಹಾಗೂ ಗ್ರಾಹಕರ ಕುಂದುಕೊರತೆ, ದೂರು ನಿವಾರಣಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೊಡ್ಡ ಉದ್ಯಮಿಗಳು ಸಾಲ ಮರುಪಾವತಿ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ಆದರೆ, ಸ್ವ–ಸಹಾಯ ಸಂಘಗಳ ಸದಸ್ಯರು ಎಷ್ಟೇ ಕಷ್ಟವಾದರೂ ಸರಿಯಾದ ಸಮಯಕ್ಕೆ ಮರುಪಾವತಿ ಮಾಡುತ್ತಾರೆ. ಆ ಮೂಲಕ ಸ್ವಸಹಾಯ ಸಂಘಗಳು ಬ್ಯಾಂಕಿಂಗ್ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ನೀಡಲು ಉತ್ಸುಕತೆ ತೋರಿಸುತ್ತಿವೆ ಎಂದು ಹೇಳಿದರು.</p>.<p>ಉಡುಪಿ ಹಾಗೂ ದಕ್ಷಿಣ ಕನ್ನಡದ ಜಿಲ್ಲೆಯ ಒಟ್ಟು ಸಾಲದಲ್ಲಿ ಶೇ 50ರಷ್ಟು ಸಾಲವನ್ನು ಸ್ವ–ಸಹಾಯ ಸಂಘಗಳು ಪಡೆದುಕೊಂಡಿದೆ. ದೇಶದಲ್ಲಿ ಸ್ವ–ಸಹಾಯ ಸಂಘಗಳಿಗೆ ಸಾಲ ನೀಡುವಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು 7 ಲಕ್ಷ ಸ್ವಸಹಾಯ ಗುಂಪುಗಳಿವೆ ಎಂದು ಮಾಹಿತಿ ನೀಡಿದರು.</p>.<p>ಬೆಂಗಳೂರು ಎ.ಕೆ.ಎಂ.ಐ ಬಿ.ಪಾಮಾಡಿ ಮಾತನಾಡಿ, ರಾಜ್ಯದಲ್ಲಿ ಒಟ್ಟು 28 ಸಂಸ್ಥೆಗಳಿದ್ದು, ಉಡುಪಿ ಜಿಲ್ಲೆಯ 8 ಸಂಸ್ಥೆಗಳಿಂದ ₹ 1.43 ಲಕ್ಷ ಜನರು ಖಾತೆಯನ್ನು ಹೊಂದಿದ್ದಾರೆ. ಸುಮಾರು ₹ 663 ಕೋಟಿ ಸಾಲ ಪಡೆದುಕೊಂಡಿದ್ದಾರೆ. ಅದರಲ್ಲಿ ₹ 17,000 ಮಾತ್ರ ವಿವಿಧ ಕಾರಣದಿಂದ ಪಾವತಿಯಾದೆ ಉಳಿದುಕೊಂಡಿದೆ. ಕಿರುಸಾಲ ಯೋಜನೆಯಿಂದ ಮಹಿಳೆಯರು ಶೋಷಣೆ ಮುಕ್ತರಾಗಿ ಸ್ವತಂತ್ರರಾಗಲು ಸಾಧ್ಯವಾಗಲಿದೆ. ಇತರೆಡೆಯಿಂದ ಅಧಿಕ ಬಡ್ಡಿದರದಲ್ಲಿ ಸಾಲಪಡೆದು ಶೋಷಣೆಗೆ ಒಳಗಾಗುವುದು ತಪ್ಪಲಿದೆ ಎಂದರು.</p>.<p>ಸಿಂಡಿಕೇಟ್ ಲೀಡ್ ಬ್ಯಾಂಕಿನ ಚೀಫ್ ಮ್ಯಾನೇಜರ್ ಡಿ.ಸಿ ರುದ್ರೇಶ್, ಎ.ಕೆ.ಎಂ.ಐ ಸಿಇಓ ವಿ.ವೆನ್ ಹೆಗ್ಡೆ ಉಪಸ್ಥಿತರಿದ್ದರು. ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಪಿ.ಕೆ ಪುರುಷೋತ್ತಮ ಸ್ವಾಗತಿಸಿದರು. ಮಮತ ಕಾರ್ಯಕ್ರಮವನ್ನು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong>ಜಿಲ್ಲೆಯ ಸ್ವ–ಸಹಾಯ ಸಂಘಗಳು ಸಾಲ ಮರುಪಾವತಿ ಮಾಡುವಲ್ಲಿ ಮೂಂಚೂಣಿ ಸ್ಥಾನದಲ್ಲಿದೆ ಎಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನರ್ಬಾಡ್ ಎಜಿಎಂ ಎಸ್.ರಮೇಶ್ ತಿಳಿಸಿದರು.</p>.<p>ಕರ್ನಾಟಕ ಕಿರು ಹಣಕಾಸು ಸಂಸ್ಥೆಗಳ ಒಕ್ಕೂಟ ಬೆಂಗಳೂರು ಆಶ್ರಯದಲ್ಲಿ ಗುರುವಾರ ಪ್ರಗತಿಸೌಧದಲ್ಲಿ ಆಯೋಜಿಸಿದ್ದ ಕಿರು ಹಣಕಾಸು ವ್ಯವಹಾರ ಮಾಡುತ್ತಿರುವ ಪಾಲುದಾರರಿಗೆ ಹಣಕಾಸು ನಿರ್ವಹಣೆಯ ಕಾರ್ಯಾಗಾರ ಹಾಗೂ ಗ್ರಾಹಕರ ಕುಂದುಕೊರತೆ, ದೂರು ನಿವಾರಣಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೊಡ್ಡ ಉದ್ಯಮಿಗಳು ಸಾಲ ಮರುಪಾವತಿ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ಆದರೆ, ಸ್ವ–ಸಹಾಯ ಸಂಘಗಳ ಸದಸ್ಯರು ಎಷ್ಟೇ ಕಷ್ಟವಾದರೂ ಸರಿಯಾದ ಸಮಯಕ್ಕೆ ಮರುಪಾವತಿ ಮಾಡುತ್ತಾರೆ. ಆ ಮೂಲಕ ಸ್ವಸಹಾಯ ಸಂಘಗಳು ಬ್ಯಾಂಕಿಂಗ್ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ನೀಡಲು ಉತ್ಸುಕತೆ ತೋರಿಸುತ್ತಿವೆ ಎಂದು ಹೇಳಿದರು.</p>.<p>ಉಡುಪಿ ಹಾಗೂ ದಕ್ಷಿಣ ಕನ್ನಡದ ಜಿಲ್ಲೆಯ ಒಟ್ಟು ಸಾಲದಲ್ಲಿ ಶೇ 50ರಷ್ಟು ಸಾಲವನ್ನು ಸ್ವ–ಸಹಾಯ ಸಂಘಗಳು ಪಡೆದುಕೊಂಡಿದೆ. ದೇಶದಲ್ಲಿ ಸ್ವ–ಸಹಾಯ ಸಂಘಗಳಿಗೆ ಸಾಲ ನೀಡುವಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು 7 ಲಕ್ಷ ಸ್ವಸಹಾಯ ಗುಂಪುಗಳಿವೆ ಎಂದು ಮಾಹಿತಿ ನೀಡಿದರು.</p>.<p>ಬೆಂಗಳೂರು ಎ.ಕೆ.ಎಂ.ಐ ಬಿ.ಪಾಮಾಡಿ ಮಾತನಾಡಿ, ರಾಜ್ಯದಲ್ಲಿ ಒಟ್ಟು 28 ಸಂಸ್ಥೆಗಳಿದ್ದು, ಉಡುಪಿ ಜಿಲ್ಲೆಯ 8 ಸಂಸ್ಥೆಗಳಿಂದ ₹ 1.43 ಲಕ್ಷ ಜನರು ಖಾತೆಯನ್ನು ಹೊಂದಿದ್ದಾರೆ. ಸುಮಾರು ₹ 663 ಕೋಟಿ ಸಾಲ ಪಡೆದುಕೊಂಡಿದ್ದಾರೆ. ಅದರಲ್ಲಿ ₹ 17,000 ಮಾತ್ರ ವಿವಿಧ ಕಾರಣದಿಂದ ಪಾವತಿಯಾದೆ ಉಳಿದುಕೊಂಡಿದೆ. ಕಿರುಸಾಲ ಯೋಜನೆಯಿಂದ ಮಹಿಳೆಯರು ಶೋಷಣೆ ಮುಕ್ತರಾಗಿ ಸ್ವತಂತ್ರರಾಗಲು ಸಾಧ್ಯವಾಗಲಿದೆ. ಇತರೆಡೆಯಿಂದ ಅಧಿಕ ಬಡ್ಡಿದರದಲ್ಲಿ ಸಾಲಪಡೆದು ಶೋಷಣೆಗೆ ಒಳಗಾಗುವುದು ತಪ್ಪಲಿದೆ ಎಂದರು.</p>.<p>ಸಿಂಡಿಕೇಟ್ ಲೀಡ್ ಬ್ಯಾಂಕಿನ ಚೀಫ್ ಮ್ಯಾನೇಜರ್ ಡಿ.ಸಿ ರುದ್ರೇಶ್, ಎ.ಕೆ.ಎಂ.ಐ ಸಿಇಓ ವಿ.ವೆನ್ ಹೆಗ್ಡೆ ಉಪಸ್ಥಿತರಿದ್ದರು. ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಪಿ.ಕೆ ಪುರುಷೋತ್ತಮ ಸ್ವಾಗತಿಸಿದರು. ಮಮತ ಕಾರ್ಯಕ್ರಮವನ್ನು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>