ಮುಜರಾಯಿ ಅಧೀನದ ದೇವಸ್ಥಾನಗಳಲ್ಲಿ ಯಕ್ಷಗಾನ ಮೇಳದ ಕಲಾವಿದರಿಗೆ ಒಪ್ಪಂದದಂತೆ ಹಣ ನೀಡಬೇಕು ಎನ್ನುವ ಆದೇಶ ನೀಡಿದ್ದರೂ, ಒಂದೆರಡು ದೇವಸ್ಥಾನಗಳು ಸರ್ಕಾರದ ಆದೇಶವನ್ನು ಕಡೆಗಣಿಸಿ, ಕಲಾವಿದರಿಗೆ ಹಣ ನೀಡುತ್ತಿಲ್ಲ ಎನ್ನುವ ವಿಚಾರದ ಕುರಿತು ಮಾತನಾಡಿದ ಸಚಿವರು, ಮಾನವೀಯ ನೆಲೆಯಲ್ಲಿ ಒಪ್ಪಂದದಂತೆ ಪೂರ್ತಿ ಹಣ ನೀಡಲು ಸೂಚಿಸಲಾಗಿದೆ. ಯಾವ ದೇವಸ್ಥಾನಗಳಲ್ಲಿ ಆದೇಶ ಪಾಲನೆಯಾಗುತ್ತಿಲ್ಲ ಎನ್ನುವ ಬಗ್ಗೆ ವರದಿ ತರಿಸಿಕೊಂಡು, ಸಂಘರ್ಷವಿಲ್ಲದೆ ಆದೇಶ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.