<p><strong>ಬ್ರಹ್ಮಾವರ:</strong> ಕೋಟ ಉಪವಿಭಾಗ ವ್ಯಾಪ್ತಿಯ ಮೆಸ್ಕಾಂ ಜನಸಂಪರ್ಕ ಸಭೆ ಉಪವಿಭಾಗದ ಸಭಾಂಗಣದಲ್ಲಿ ನಡೆಯಿತು.</p>.<p>ಪರಿಸರವಾದಿ ಕೋ.ಗಿನಾ ಕೋಟ ಉಪವಿಭಾಗಕ್ಕೆ ಸ್ವಂತ ಕಚೇರಿಗೆ ಮಂಜೂರಾತಿ ಆದೇಶಗೊಂಡ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡರೂ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಕೋಟದಲ್ಲಿ ಮೆಸ್ಕಾಂ ಸರ್ವಿಸ್ ಸ್ಟೇಷನ್ ಇದ್ದರೂ ಸಿಬ್ಬಂದಿಯನ್ನು ನೇಮಕಗೊಳಿಸಿಲ್ಲ. ಇದರಿಂದ ಗ್ರಾಹಕರಿಗೆ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೆಸ್ಕಾಂ ಉಡುಪಿ ಸಹಾಯ ಅಧೀಕ್ಷಕ ದಿನೇಶ ಉಪಾಧ್ಯಾಯ ಅವರು, ಉಪವಿಭಾಗದ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಪುನಃ ಪ್ರಕ್ರಿಯೆ ನಡೆಸಬೇಕಿದೆ ಎಂದು ಉತ್ತರಿಸಿದರು.</p>.<p>ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಖಾಸಗಿ ಸ್ಥಳದ ವಿವಿಧ ಭಾಗಗಳಲ್ಲಿರುವ ಹಳೆಯ ಕಂಬಗಳನ್ನು ತೆರವುಗೊಳಿಸಲು ಸಾಮಾಜಿಕ ಕಾರ್ಯಕರ್ತ ನಾಗರಾಜ ಗಾಣಿಗ ಮನವಿ ಮಾಡಿದರು.</p>.<p>ಪಿ.ಎಂ ಹರ್ ಘರ್ ಸೋಲಾರಿಕರಣಗೊಳಿಸಲು ಕೋಟತಟ್ಟು ಗ್ರಾಮ ಪಂಚಾಯಿತಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಬಗ್ಗೆ ಸಭೆಯಲ್ಲಿ ಪಂಚಾಯಿತಿ ಅಧ್ಯಕ್ಷ ಸತೀಶ ಬಾರಿಕೆರೆ ಯೋಜನೆ ಅನುಷ್ಠಾನದ ಕುರಿತಂತೆ ಮಾಹಿತಿ ಪಡೆದುಕೊಂಡರು.</p>.<p>ಕಾರ್ಯವಾಹಕ ಸಹಾಯಕ ಎಂಜಿನಿಯರ್ ಯಶವಂತ್, ಕೋಟ ವಿಭಾಗದ ಸಹಾಯಕ ಕಾರ್ಯವಾಹಕ ಎಂಜಿನಿಯರ್ ಪ್ರತಾಪ್ಚಂದ್ರ ಶೆಟ್ಟಿ, ಸಹಾಯಕ ಎಂಜಿನಿಯರ್ ಶ್ರೀಕಾಂತ್, ಶಾಖಾಧಿಕಾರಿಗಳಾದ ಮಹೇಶ, ವೈಭವ ಶೆಟ್ಟಿ, ಲೆಕ್ಕಾಧಿಕಾರಿ ಗಣೇಶ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಕೋಟ ಉಪವಿಭಾಗ ವ್ಯಾಪ್ತಿಯ ಮೆಸ್ಕಾಂ ಜನಸಂಪರ್ಕ ಸಭೆ ಉಪವಿಭಾಗದ ಸಭಾಂಗಣದಲ್ಲಿ ನಡೆಯಿತು.</p>.<p>ಪರಿಸರವಾದಿ ಕೋ.ಗಿನಾ ಕೋಟ ಉಪವಿಭಾಗಕ್ಕೆ ಸ್ವಂತ ಕಚೇರಿಗೆ ಮಂಜೂರಾತಿ ಆದೇಶಗೊಂಡ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡರೂ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಕೋಟದಲ್ಲಿ ಮೆಸ್ಕಾಂ ಸರ್ವಿಸ್ ಸ್ಟೇಷನ್ ಇದ್ದರೂ ಸಿಬ್ಬಂದಿಯನ್ನು ನೇಮಕಗೊಳಿಸಿಲ್ಲ. ಇದರಿಂದ ಗ್ರಾಹಕರಿಗೆ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೆಸ್ಕಾಂ ಉಡುಪಿ ಸಹಾಯ ಅಧೀಕ್ಷಕ ದಿನೇಶ ಉಪಾಧ್ಯಾಯ ಅವರು, ಉಪವಿಭಾಗದ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಪುನಃ ಪ್ರಕ್ರಿಯೆ ನಡೆಸಬೇಕಿದೆ ಎಂದು ಉತ್ತರಿಸಿದರು.</p>.<p>ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಖಾಸಗಿ ಸ್ಥಳದ ವಿವಿಧ ಭಾಗಗಳಲ್ಲಿರುವ ಹಳೆಯ ಕಂಬಗಳನ್ನು ತೆರವುಗೊಳಿಸಲು ಸಾಮಾಜಿಕ ಕಾರ್ಯಕರ್ತ ನಾಗರಾಜ ಗಾಣಿಗ ಮನವಿ ಮಾಡಿದರು.</p>.<p>ಪಿ.ಎಂ ಹರ್ ಘರ್ ಸೋಲಾರಿಕರಣಗೊಳಿಸಲು ಕೋಟತಟ್ಟು ಗ್ರಾಮ ಪಂಚಾಯಿತಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಬಗ್ಗೆ ಸಭೆಯಲ್ಲಿ ಪಂಚಾಯಿತಿ ಅಧ್ಯಕ್ಷ ಸತೀಶ ಬಾರಿಕೆರೆ ಯೋಜನೆ ಅನುಷ್ಠಾನದ ಕುರಿತಂತೆ ಮಾಹಿತಿ ಪಡೆದುಕೊಂಡರು.</p>.<p>ಕಾರ್ಯವಾಹಕ ಸಹಾಯಕ ಎಂಜಿನಿಯರ್ ಯಶವಂತ್, ಕೋಟ ವಿಭಾಗದ ಸಹಾಯಕ ಕಾರ್ಯವಾಹಕ ಎಂಜಿನಿಯರ್ ಪ್ರತಾಪ್ಚಂದ್ರ ಶೆಟ್ಟಿ, ಸಹಾಯಕ ಎಂಜಿನಿಯರ್ ಶ್ರೀಕಾಂತ್, ಶಾಖಾಧಿಕಾರಿಗಳಾದ ಮಹೇಶ, ವೈಭವ ಶೆಟ್ಟಿ, ಲೆಕ್ಕಾಧಿಕಾರಿ ಗಣೇಶ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>