ಕೆಆರ್ಎಸ್ ಪಕ್ಷದ ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ ಮಾತನಾಡಿ, ಖಾಸಗಿ ಮೆಡಿಕಲ್ ಕಾಲೇಜು ಮಾಫಿಯಾ ದೊಡ್ಡದಾಗಿದ್ದು ಬಡವರಿಗೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಸಿಗಬೇಕಾದರೆ, ಬಡ ವಿದ್ಯಾರ್ಥಿಗಳ ಕೈಗೆ ವೈದ್ಯಕೀಯ ಶಿಕ್ಷಣ ಎಟುಕಬೇಕಾದರೆ ಪ್ರತಿ ಜಿಲ್ಲೆಗೂ ಸರ್ಕಾರಿ ಮೆಡಿಕಲ್ ಕಾಲೇಜು ಅತ್ಯವಶ್ಯ ಎಂದು ಅಭಿಪ್ರಾಯಪಟ್ಟರು.