<p><strong>ಕಾರ್ಕಳ</strong>: ಪಕ್ಷವೊಂದರ ಪರವಾಗಿ ಸಾಮಾಜಿಕ ಮಾಧ್ಯಮವೊಂದರಲ್ಲಿ ಪ್ರಚಾರ ಮಾಡುವ ವೇಳೆ ಪತ್ರಕರ್ತರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪತ್ರಕರ್ತರ ಕ್ಷಮೆ ಕೇಳಿದ್ದಾರೆ.</p>.<p>ಪ್ರಖ್ಯಾತ್ ಬಿ.ಜೆ., ಹರಿಪ್ರಸಾದ್ ಶೆಟ್ಟಿ ಎಂಬುವರು ರಾಜಕೀಯ ದಾಳದಿಂದ ಪತ್ರಕರ್ತರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಬಗ್ಗೆ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಶರೀಫ್ ನೇತೃತ್ವದಲ್ಲಿ ಪತ್ರಕರ್ತರು ಕಾರ್ಕಳ ಎಎಸ್ಪಿ ಡಾ.ಹರ್ಷ ಪ್ರಿಯಂವದಾ ಅವರಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು.</p>.<p>ಕಾರ್ಕಳ ಪೊಲೀಸರು ಆರೋಪಿಗಳಾದ ಪ್ರಖ್ಯಾತ್ ಬಿ.ಜೆ., ಹರಿಪ್ರಸಾದ್ ಶೆಟ್ಟಿ ಅವರನ್ನು ಕಚೇರಿಗೆ ಕರೆಸಿ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ಗೆ ಸಂಬಂಧಿಸಿ ವಿವರಣೆ ಕೇಳಿದ್ದರು.</p>.<p>‘ನಾವು ಆ ಸಂದರ್ಭದಲ್ಲಿ ಮಾಡಿರುವ ಕಮೆಂಟ್ನಲ್ಲಿ ಅಪಾರ್ಥವಾಗಿರುವ ವಿಷಯ ನಮಗೆ ತಿಳಿಯಿತು. ಈ ಕುರಿತು ಕ್ಷಮೆ ಕೇಳುವೆವು. ಇನ್ನು ಮುಂದೆ ಇಂಥ ಪೋಸ್ಟ್ ಮಾಡುವುದಿ. ಇದನ್ನು ಮನ್ನಿಸಬೇಕು’ ಎಂದು ವಿನಂತಿಸಿಕೊಂಡಿದ್ದಾರೆ.</p>.<p>ಈ ಕುರಿತು ಆರೋಪಿಗಳಿಂದ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ.</p>.<p>ಮುಂದೆ ಇಂಥ ಪೋಸ್ಟ್ ಮಾಡಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಡಾ.ಹರ್ಷಾ ಪ್ರಿಯಂವದಾ ಅವರು ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ಪಕ್ಷವೊಂದರ ಪರವಾಗಿ ಸಾಮಾಜಿಕ ಮಾಧ್ಯಮವೊಂದರಲ್ಲಿ ಪ್ರಚಾರ ಮಾಡುವ ವೇಳೆ ಪತ್ರಕರ್ತರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪತ್ರಕರ್ತರ ಕ್ಷಮೆ ಕೇಳಿದ್ದಾರೆ.</p>.<p>ಪ್ರಖ್ಯಾತ್ ಬಿ.ಜೆ., ಹರಿಪ್ರಸಾದ್ ಶೆಟ್ಟಿ ಎಂಬುವರು ರಾಜಕೀಯ ದಾಳದಿಂದ ಪತ್ರಕರ್ತರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಬಗ್ಗೆ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಶರೀಫ್ ನೇತೃತ್ವದಲ್ಲಿ ಪತ್ರಕರ್ತರು ಕಾರ್ಕಳ ಎಎಸ್ಪಿ ಡಾ.ಹರ್ಷ ಪ್ರಿಯಂವದಾ ಅವರಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು.</p>.<p>ಕಾರ್ಕಳ ಪೊಲೀಸರು ಆರೋಪಿಗಳಾದ ಪ್ರಖ್ಯಾತ್ ಬಿ.ಜೆ., ಹರಿಪ್ರಸಾದ್ ಶೆಟ್ಟಿ ಅವರನ್ನು ಕಚೇರಿಗೆ ಕರೆಸಿ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ಗೆ ಸಂಬಂಧಿಸಿ ವಿವರಣೆ ಕೇಳಿದ್ದರು.</p>.<p>‘ನಾವು ಆ ಸಂದರ್ಭದಲ್ಲಿ ಮಾಡಿರುವ ಕಮೆಂಟ್ನಲ್ಲಿ ಅಪಾರ್ಥವಾಗಿರುವ ವಿಷಯ ನಮಗೆ ತಿಳಿಯಿತು. ಈ ಕುರಿತು ಕ್ಷಮೆ ಕೇಳುವೆವು. ಇನ್ನು ಮುಂದೆ ಇಂಥ ಪೋಸ್ಟ್ ಮಾಡುವುದಿ. ಇದನ್ನು ಮನ್ನಿಸಬೇಕು’ ಎಂದು ವಿನಂತಿಸಿಕೊಂಡಿದ್ದಾರೆ.</p>.<p>ಈ ಕುರಿತು ಆರೋಪಿಗಳಿಂದ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ.</p>.<p>ಮುಂದೆ ಇಂಥ ಪೋಸ್ಟ್ ಮಾಡಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಡಾ.ಹರ್ಷಾ ಪ್ರಿಯಂವದಾ ಅವರು ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>