<p><strong>ಕುಂದಾಪುರ (ಉಡುಪಿ): </strong>ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಹಾಕಿದ ಆರೋಪದಡಿ ಸೌದಿ ಅರೆಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಕುಂದಾಪುರ ತಾಲ್ಲೂಕಿನ ಕೋಟೇಶ್ವರದ ಬೀಜಾಡಿಯ ಹರೀಶ್ ಬಂಗೇರ ಆರೋಪಮುಕ್ತರಾಗಿ ಬಿಡುಗಡೆಯಾಗಿದ್ದಾರೆ.</p>.<p>ಮಾಡದ ತಪ್ಪಿಗೆ 20 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವ ಹರೀಶ್ ಬಂಗೇರ ಬುಧವಾರ ನಸುಕಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭ ಪತ್ನಿ ಹಾಗೂ ಸ್ನೇಹಿತರು ಬರಮಾಡಿಕೊಂಡರು.</p>.<p><strong>ಘಟನೆ ವಿವರ: </strong>ಹರೀಶ್ ಬಂಗೇರ ಸೌದಿಯ ಧಮನ್ ಆಲ್ ಹಸಾದ ಕಾರ್ಟೂನ್ ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದ ಎಸಿ ಮೆಕ್ಯಾನಿಕ್ ಆಗಿ ದುಡಿಯುತ್ತಿದ್ದರು. ಕಿಡಿಗೇಡಿಗಳು ಹರೀಶ್ ಬಂಗೇರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮೆಕ್ಕಾ ವಿರುದ್ಧ ಸಂದೇಶ ಹಾಕಿದ್ದರು. ಈ ಸಂಬಂಧ ಸೌದಿ ಪೊಲೀಸರು ಬಂಗೇರ ಅವರನ್ನು 2019, ಡಿ.22ರಂದು ಬಂಧಿಸಿದ್ದರು.</p>.<p>ಪತಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ ಎಂದು ಪತ್ನಿ ಸಮನಾ ಉಡುಪಿಯ ಸೆನ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಮೂಡಬಿದರೆಯ ಅಬ್ದುಲ್ ಹುಯೇಜ್ ಹಾಗೂ ಅಬ್ದುಲ್ ತುಯೇಜ್ ಎಂಬುವರನ್ನು ಬಂಧಿಸಿದ್ದರು.</p>.<p>ಬಳಿಕ ಸೌದಿಯಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಹರೀಶ್ ಬಂಗೇರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸರ್ಕಾರ ಹಾಗೂ ಸಂಘ ಸಂಸ್ಥೆಗಳ ನಿರಂತರ ಪ್ರಯತ್ನದ ಫಲವಾಗಿ ಬಂಗೇರ ಬಿಡುಗಡೆಯಾಗಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/sports/cricket/no-other-india-bowler-has-such-aggression-in-mohammed-siraj-body-language-says-salman-butt-858776.html" target="_blank"> INDvsENG: ಸಿರಾಜ್ರಂತಹ ಆಕ್ರಮಣಶೀಲತೆ ಗೆಲುವಿಗೆ ಸಹಾಯ ಮಾಡುತ್ತದೆ: ಸಲ್ಮಾನ್ ಬಟ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ (ಉಡುಪಿ): </strong>ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಹಾಕಿದ ಆರೋಪದಡಿ ಸೌದಿ ಅರೆಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಕುಂದಾಪುರ ತಾಲ್ಲೂಕಿನ ಕೋಟೇಶ್ವರದ ಬೀಜಾಡಿಯ ಹರೀಶ್ ಬಂಗೇರ ಆರೋಪಮುಕ್ತರಾಗಿ ಬಿಡುಗಡೆಯಾಗಿದ್ದಾರೆ.</p>.<p>ಮಾಡದ ತಪ್ಪಿಗೆ 20 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವ ಹರೀಶ್ ಬಂಗೇರ ಬುಧವಾರ ನಸುಕಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭ ಪತ್ನಿ ಹಾಗೂ ಸ್ನೇಹಿತರು ಬರಮಾಡಿಕೊಂಡರು.</p>.<p><strong>ಘಟನೆ ವಿವರ: </strong>ಹರೀಶ್ ಬಂಗೇರ ಸೌದಿಯ ಧಮನ್ ಆಲ್ ಹಸಾದ ಕಾರ್ಟೂನ್ ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದ ಎಸಿ ಮೆಕ್ಯಾನಿಕ್ ಆಗಿ ದುಡಿಯುತ್ತಿದ್ದರು. ಕಿಡಿಗೇಡಿಗಳು ಹರೀಶ್ ಬಂಗೇರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮೆಕ್ಕಾ ವಿರುದ್ಧ ಸಂದೇಶ ಹಾಕಿದ್ದರು. ಈ ಸಂಬಂಧ ಸೌದಿ ಪೊಲೀಸರು ಬಂಗೇರ ಅವರನ್ನು 2019, ಡಿ.22ರಂದು ಬಂಧಿಸಿದ್ದರು.</p>.<p>ಪತಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ ಎಂದು ಪತ್ನಿ ಸಮನಾ ಉಡುಪಿಯ ಸೆನ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಮೂಡಬಿದರೆಯ ಅಬ್ದುಲ್ ಹುಯೇಜ್ ಹಾಗೂ ಅಬ್ದುಲ್ ತುಯೇಜ್ ಎಂಬುವರನ್ನು ಬಂಧಿಸಿದ್ದರು.</p>.<p>ಬಳಿಕ ಸೌದಿಯಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಹರೀಶ್ ಬಂಗೇರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸರ್ಕಾರ ಹಾಗೂ ಸಂಘ ಸಂಸ್ಥೆಗಳ ನಿರಂತರ ಪ್ರಯತ್ನದ ಫಲವಾಗಿ ಬಂಗೇರ ಬಿಡುಗಡೆಯಾಗಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/sports/cricket/no-other-india-bowler-has-such-aggression-in-mohammed-siraj-body-language-says-salman-butt-858776.html" target="_blank"> INDvsENG: ಸಿರಾಜ್ರಂತಹ ಆಕ್ರಮಣಶೀಲತೆ ಗೆಲುವಿಗೆ ಸಹಾಯ ಮಾಡುತ್ತದೆ: ಸಲ್ಮಾನ್ ಬಟ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>