<p><strong>ಉಡುಪಿ</strong>: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ನಡೆಯಿತು.</p>.<p>2022ರ ಜುಲೈ 1ರಿಂದ 2024 ಜುಲೈ 31ರ (25 ತಿಂಗಳು) ನಡುವೆ ನಿವೃತ್ತರಾಗಿರುವ ನೌಕರರಿಗೆ ನಿವೃತ್ತಿ ಸೌಲಭ್ಯಗಳಾದ ಡಿಸಿಆರ್ಜಿ, ಇ.ಎಲ್. ಎನ್ಕ್ಯಾಶ್ಮೆಂಟ್, ಕಮ್ಯುಟೇಶನ್ಗಳನ್ನು 7ನೇ ವೇತನ ಆಯೋಗದ ಪರಿಷ್ಕೃತ ವೇತನದನ್ವಯ ಸಾಂಪ್ರದಾಯಿಕವಾಗಿ ನೀಡಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.</p>.<p>2022 ಮತ್ತು 2024ರ ನಡುವಿನ 25 ತಿಂಗಳಲ್ಲಿ ರಾಜ್ಯದಲ್ಲಿ 17,963 ಮಂದಿ ನಿವೃತ್ತರಾಗಿದ್ದಾರೆ. ಶಿಕ್ಷಕರು, ಆರೋಗ್ಯ ಇಲಾಖೆ ನೌಕರರು ಸೇರಿದಂತೆ ವಿವಿಧ ಇಲಾಖೆಗಳ ನೌಕರರು ಇದರಲ್ಲಿ ಒಳಗೊಂಡಿದ್ದಾರೆ ಎಂದು ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದರು.</p>.<p>ನಾವು ಕೂಡ 7ನೇ ವೇತನ ಆಯೋಗದ ಷರಿಷ್ಕೃತ ವೇತನದ ಮೇಲೆ ಆರ್ಥಿಕ ಸೌಲಭ್ಯ ಪಡೆಯಲು ಅರ್ಹರಿದ್ದರೂ ನಮಗೆ ಕೊಡದೆ ಹಳೆಯ ವೇತನದಲ್ಲಿ ಸೌಲಭ್ಯ ನೀಡಲಾಗಿದೆ ಎಂದು ಅವರು ಹೇಳಿದರು.</p>.<p>35–40 ವರ್ಷ ಸುದೀರ್ಘ ಕಾರ್ಯ ನಿರ್ವಹಿಸಿ, ಕೆಳಹಂತದ ವೇತನ ಶ್ರೇಣಿಯಲ್ಲಿ ನೌಕರಿಗೆ ಸೇರಿ ನಿವೃತ್ತರಾದ ನಾವು, ನಿವೃತ್ತಿ ಸಂದರ್ಭದಲ್ಲಿ ಬರಬಹುದಾದ ಆರ್ಥಿಕ ಸೌಲಭ್ಯಗಳ ಮೇಲೆಯೇ ಅವಲಂಬಿತರಾಗಿದ್ದೇವೆ. ಸರ್ಕಾರದ ನಿರ್ಧಾರದಿಂದ ನಮಗೆ ತುಂಬಾ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅವರು ತಿಳಿಸಿದರು.</p>.<p>‘ನಮಗೆ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು. ಏಳನೇ ವೇತನ ಆಯೋಗದ ಆದೇಶವನ್ನು ಪರಿಶೀಲಿಸಿ ಪರಿಷ್ಕೃತ ಆದೇಶ ಹೊರಡಿಸಬೇಕು’ ಎಂದು ಧರಣಿ ನಿರತರು ಒತ್ತಾಯಿಸಿದರು.</p>.<p>ಗಣರಾಜ್ ಮೋಳ್ಕೋಡ್, ದಯಾನಂದ, ಹಿತೇಶ್ ಭಂಡಾರಿ, ಕೃಷ್ಣ, ರಾಜು ಮಯ್ಯಾಡಿ, ವೇಣುಗೋಪಾಲ ಹೆಗ್ಡೆ, ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ನಡೆಯಿತು.</p>.<p>2022ರ ಜುಲೈ 1ರಿಂದ 2024 ಜುಲೈ 31ರ (25 ತಿಂಗಳು) ನಡುವೆ ನಿವೃತ್ತರಾಗಿರುವ ನೌಕರರಿಗೆ ನಿವೃತ್ತಿ ಸೌಲಭ್ಯಗಳಾದ ಡಿಸಿಆರ್ಜಿ, ಇ.ಎಲ್. ಎನ್ಕ್ಯಾಶ್ಮೆಂಟ್, ಕಮ್ಯುಟೇಶನ್ಗಳನ್ನು 7ನೇ ವೇತನ ಆಯೋಗದ ಪರಿಷ್ಕೃತ ವೇತನದನ್ವಯ ಸಾಂಪ್ರದಾಯಿಕವಾಗಿ ನೀಡಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.</p>.<p>2022 ಮತ್ತು 2024ರ ನಡುವಿನ 25 ತಿಂಗಳಲ್ಲಿ ರಾಜ್ಯದಲ್ಲಿ 17,963 ಮಂದಿ ನಿವೃತ್ತರಾಗಿದ್ದಾರೆ. ಶಿಕ್ಷಕರು, ಆರೋಗ್ಯ ಇಲಾಖೆ ನೌಕರರು ಸೇರಿದಂತೆ ವಿವಿಧ ಇಲಾಖೆಗಳ ನೌಕರರು ಇದರಲ್ಲಿ ಒಳಗೊಂಡಿದ್ದಾರೆ ಎಂದು ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದರು.</p>.<p>ನಾವು ಕೂಡ 7ನೇ ವೇತನ ಆಯೋಗದ ಷರಿಷ್ಕೃತ ವೇತನದ ಮೇಲೆ ಆರ್ಥಿಕ ಸೌಲಭ್ಯ ಪಡೆಯಲು ಅರ್ಹರಿದ್ದರೂ ನಮಗೆ ಕೊಡದೆ ಹಳೆಯ ವೇತನದಲ್ಲಿ ಸೌಲಭ್ಯ ನೀಡಲಾಗಿದೆ ಎಂದು ಅವರು ಹೇಳಿದರು.</p>.<p>35–40 ವರ್ಷ ಸುದೀರ್ಘ ಕಾರ್ಯ ನಿರ್ವಹಿಸಿ, ಕೆಳಹಂತದ ವೇತನ ಶ್ರೇಣಿಯಲ್ಲಿ ನೌಕರಿಗೆ ಸೇರಿ ನಿವೃತ್ತರಾದ ನಾವು, ನಿವೃತ್ತಿ ಸಂದರ್ಭದಲ್ಲಿ ಬರಬಹುದಾದ ಆರ್ಥಿಕ ಸೌಲಭ್ಯಗಳ ಮೇಲೆಯೇ ಅವಲಂಬಿತರಾಗಿದ್ದೇವೆ. ಸರ್ಕಾರದ ನಿರ್ಧಾರದಿಂದ ನಮಗೆ ತುಂಬಾ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅವರು ತಿಳಿಸಿದರು.</p>.<p>‘ನಮಗೆ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು. ಏಳನೇ ವೇತನ ಆಯೋಗದ ಆದೇಶವನ್ನು ಪರಿಶೀಲಿಸಿ ಪರಿಷ್ಕೃತ ಆದೇಶ ಹೊರಡಿಸಬೇಕು’ ಎಂದು ಧರಣಿ ನಿರತರು ಒತ್ತಾಯಿಸಿದರು.</p>.<p>ಗಣರಾಜ್ ಮೋಳ್ಕೋಡ್, ದಯಾನಂದ, ಹಿತೇಶ್ ಭಂಡಾರಿ, ಕೃಷ್ಣ, ರಾಜು ಮಯ್ಯಾಡಿ, ವೇಣುಗೋಪಾಲ ಹೆಗ್ಡೆ, ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>