<p><strong>ಹೆಬ್ರಿ</strong>: ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿ ಮತ್ತು ನಂದಿಕೇಶ್ವರ ದೇವಸ್ಥಾನದದಲ್ಲಿ ಜುಲೈ 18ರಂದು ನಡೆಯುವ ಧರ್ಮಯೋಗಿ ಮೋಹನ್ ಸ್ವಾಮೀಜಿ ಅವರ 3ನೇ ವರ್ಷದ ಆರಾಧನಾ ಮಹೋತ್ಸವ ಪ್ರಯಕ್ತ ನೀಡುವ ಧರ್ಮಯೋಗಿ ಸಮ್ಮಾನ್ಗೆ ಹೈದರಬಾದ್ನ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಸುಪ್ರಭಾತ ಗ್ರೂಪ್ಸ್ ಹೋಟೆಲ್ಸ್ ಉದ್ಯಮವನ್ನು 42 ವರ್ಷಗಳಿಂದ ನಡೆಸುತ್ತಿರುವ ಕೃಷ್ಣಮೂರ್ತಿ ಅವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಸೇವೆ, ದೇವಸ್ಥಾನಗಳ ಜೀರ್ಣೋದ್ಧಾರ ಸಹಿತ ವಿವಿಧ ಕಾರ್ಯಗಳಿಗೆ ಆರ್ಥಿಕ ಸಹಾಯ ನೀಡುತ್ತ ಬಂದಿದ್ದಾರೆ. ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್ ಮೂಲಕ 7 ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದ್ದಾರೆ. ಹಲವಾರು ಶಾಲೆಗಳಿಗೆ ಕುಡಿಯುವ ನೀರಿನ ಘಟಕ ಕೊಡುಗೆ, ವಿವಿಧ ನೆರವು ನೀಡುತ್ತಿದ್ದಾರೆ. ೀ ಬಹುಮುಖಿ ಸಮಾಜ ಸೇವೆ ಗುರುತಿಸಿ ಪುರಸ್ಕಾರ ನೀಡಲಾಗುತ್ತಿದೆ ಎಂದು ಕ್ಷೇತ್ರದ ಧರ್ಮಾಧಿಕಾರಿ ವಿಜಯಕೀರ್ತಿ ಸುಕುಮಾರ್ ಮೋಹನ್ ತಿಳಿಸಿದ್ದಾರೆ.</p>.<p>ಧರ್ಮಯೋಗಿ ಮೋಹನ್ ಸ್ವಾಮೀಜಿ ಆರಾಧನಾ ಮಹೋತ್ಸವ: ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿ ಮತ್ತು ನಂದಿಕೇಶ್ವರ ದೇವಸ್ಥಾನದದಲ್ಲಿ ಜುಲೈ 18ರಂದು ಧರ್ಮಯೋಗಿ ಮೋಹನ್ ಸ್ವಾಮೀಜಿ ಅವರ 3ನೇ ವರ್ಷದ ಆರಾಧನಾ ಮಹೋತ್ಸವ ಚಿಕ್ಕಮಗಳೂರಿನ ಕೆ.ಎಸ್. ನಿತ್ಯಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ.</p>.<p>ಉದ್ಯಮಿ ಯೋಗಿಶ್ ಭಟ್ ಅಧ್ಯಕ್ಷತೆ ವಹಿಸುವರು. ಸೀತಾನದಿ ವಿಠ್ಠಲ ಶೆಟ್ಟಿ ಉದ್ಘಾಟಿಸುವರು. ಕಮಲ ಎಂ.ಪಿ, ಮುದ್ರಾಡಿ ಗ್ರಾ.ಪಂ. ಸದಸ್ಯ ಗಣಪತಿ, ವಾಸ್ತುತಜ್ಞ ಕಾರ್ಕಳದ ಪ್ರಮಲ್ ಕುಮಾರ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬೆಂಗಳೂರಿನ ಜಗದೀಶ್ ಜಾಲ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ</strong>: ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿ ಮತ್ತು ನಂದಿಕೇಶ್ವರ ದೇವಸ್ಥಾನದದಲ್ಲಿ ಜುಲೈ 18ರಂದು ನಡೆಯುವ ಧರ್ಮಯೋಗಿ ಮೋಹನ್ ಸ್ವಾಮೀಜಿ ಅವರ 3ನೇ ವರ್ಷದ ಆರಾಧನಾ ಮಹೋತ್ಸವ ಪ್ರಯಕ್ತ ನೀಡುವ ಧರ್ಮಯೋಗಿ ಸಮ್ಮಾನ್ಗೆ ಹೈದರಬಾದ್ನ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಸುಪ್ರಭಾತ ಗ್ರೂಪ್ಸ್ ಹೋಟೆಲ್ಸ್ ಉದ್ಯಮವನ್ನು 42 ವರ್ಷಗಳಿಂದ ನಡೆಸುತ್ತಿರುವ ಕೃಷ್ಣಮೂರ್ತಿ ಅವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಸೇವೆ, ದೇವಸ್ಥಾನಗಳ ಜೀರ್ಣೋದ್ಧಾರ ಸಹಿತ ವಿವಿಧ ಕಾರ್ಯಗಳಿಗೆ ಆರ್ಥಿಕ ಸಹಾಯ ನೀಡುತ್ತ ಬಂದಿದ್ದಾರೆ. ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್ ಮೂಲಕ 7 ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದ್ದಾರೆ. ಹಲವಾರು ಶಾಲೆಗಳಿಗೆ ಕುಡಿಯುವ ನೀರಿನ ಘಟಕ ಕೊಡುಗೆ, ವಿವಿಧ ನೆರವು ನೀಡುತ್ತಿದ್ದಾರೆ. ೀ ಬಹುಮುಖಿ ಸಮಾಜ ಸೇವೆ ಗುರುತಿಸಿ ಪುರಸ್ಕಾರ ನೀಡಲಾಗುತ್ತಿದೆ ಎಂದು ಕ್ಷೇತ್ರದ ಧರ್ಮಾಧಿಕಾರಿ ವಿಜಯಕೀರ್ತಿ ಸುಕುಮಾರ್ ಮೋಹನ್ ತಿಳಿಸಿದ್ದಾರೆ.</p>.<p>ಧರ್ಮಯೋಗಿ ಮೋಹನ್ ಸ್ವಾಮೀಜಿ ಆರಾಧನಾ ಮಹೋತ್ಸವ: ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿ ಮತ್ತು ನಂದಿಕೇಶ್ವರ ದೇವಸ್ಥಾನದದಲ್ಲಿ ಜುಲೈ 18ರಂದು ಧರ್ಮಯೋಗಿ ಮೋಹನ್ ಸ್ವಾಮೀಜಿ ಅವರ 3ನೇ ವರ್ಷದ ಆರಾಧನಾ ಮಹೋತ್ಸವ ಚಿಕ್ಕಮಗಳೂರಿನ ಕೆ.ಎಸ್. ನಿತ್ಯಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ.</p>.<p>ಉದ್ಯಮಿ ಯೋಗಿಶ್ ಭಟ್ ಅಧ್ಯಕ್ಷತೆ ವಹಿಸುವರು. ಸೀತಾನದಿ ವಿಠ್ಠಲ ಶೆಟ್ಟಿ ಉದ್ಘಾಟಿಸುವರು. ಕಮಲ ಎಂ.ಪಿ, ಮುದ್ರಾಡಿ ಗ್ರಾ.ಪಂ. ಸದಸ್ಯ ಗಣಪತಿ, ವಾಸ್ತುತಜ್ಞ ಕಾರ್ಕಳದ ಪ್ರಮಲ್ ಕುಮಾರ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬೆಂಗಳೂರಿನ ಜಗದೀಶ್ ಜಾಲ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>