ಈ ಕುರಿತು ಮಾಹಿತಿ ನೀಡಿರುವ ಯೋಜನೆಯ ಜನಜಾಗೃತಿ ನಿರ್ದೇಶನಾಲಯದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್, ‘ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಗುರುವಾಯನಕೆರೆ ಹಾಗೂ ಧಾರವಾಡ ಜಿಲ್ಲೆಯ ಧಾರವಾಡ ಮತ್ತು ನವಲಗುಂದದಲ್ಲಿ 4 ಘಟಕಗಳನ್ನು ಪ್ರಾರಂಭಿಸಿದ್ದು, 307 ಸ್ವಯಂಸೇವಕರನ್ನು ತರಬೇತುಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗುವುದು. ಈ ತಂಡವು ಪ್ರಾಕೃತಿಕ ವಿಕೋಪ, ಸಾಂಕ್ರಾಮಿಕ ರೋಗ ಮತ್ತಿತರ ಸಂದರ್ಭಗಳಲ್ಲಿ ತ್ವರಿತವಾಗಿ ಸ್ಪಂದಿಸಿ ಸಕಾಲಿಕ ನೆರವು ನೀಡಲಿದೆ’ ಎಂದು ಅವರು ವಿವರಿಸಿದ್ದಾರೆ.