ಭಾನುವಾರ ಉಡುಪಿಯಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸಿರುವುದು ಗಂಭೀರ ವಿಚಾರ. ವಿರೋಧ ಪಕ್ಷದ ನಾಯಕನಾಗಿ ಸುಮ್ಮನೆ ಕೂರಲು ಸಾಧ್ಯವಿಲ್ಲ. ಸಂತೋಷ್ ಆತ್ಮಹತ್ಯೆಗೆ ಕಾರಣ ಏನು ಎಂಬ ಸತ್ಯ ಜನರಿಗೆ ತಿಳಿಯಬೇಕು. ತನಿಖೆ ನಡೆದರೆ ಆತ್ಮಹತ್ಯೆಗೆ ಕ್ಯಾಸೆಟ್ ಕಾರಣವೇ, ರೆಕಾರ್ಡಿಂಗ್ ಕಾರಣವೇ ಎಂಬ ವಿಚಾರ ತಿಳಿದು ಬರಲಿದೆ ಎಂದರು.