ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಭಾರತಿಗೆ ಅಮೃತ ಭಾರತಿ ಶೀರ್ಷಿಕೆಯಡಿ ಮೂರ್ನಾಲ್ಕು ತಿಂಗಳಿನಿಂದ ನಿರಂತರ ಕಾರ್ಯಕ್ರಮಗಳು ನಡೆದಿವೆ. ಕರ್ನಾಟಕದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಳ ಕುರಿತು ಎಲ್ಲ ರಂಗಾಯಣಗಳು ಒಂದು ಗಂಟೆಯ ನಾಟಕ ಪ್ರದರ್ಶಿಸಿದ್ದು, ಆ.13ರ ನಂತರ ರಂಗಾಯಣದ ಯಾತ್ರೆ ರಾಜ್ಯದಾದ್ಯಂತ ಸಂಚರಿಸಲಿದೆ. ಶಾಲಾ ಕಾಲೇಜುಗಳಲ್ಲಿ ನಾಟಕಗಳ ಪ್ರದರ್ಶನ ನಡೆಯಲಿದೆ ಎಂದರು.