ಈ ಸಂದರ್ಭ ಮೀನುಗಾರ ಮುಖಂಡ ಗಿರೀಶ್ ಮಾತನಾಡಿ, ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಗೊಂಡಿರುವಾಗ, ಬೋಟ್ ಪತ್ತೆ ಮಾಡಲು ಸಾಧ್ಯವಾಗದ ಬಗ್ಗೆ ಬೇಸರವಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಬೇಕು. ರಾಜ್ಯ ಸರ್ಕಾರ ತಕ್ಷಣ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಕರಾವಳಿಯ ಶಾಸಕರು, ಸಂಸದರು ಹಾಗೂ ಮಹಾರಾಷ್ಟ್ರ ಸರ್ಕಾರ ಜಂಟಿ ಸಭೆ ನಡೆಸಿ, ಕ್ಷಿಪ್ರ ಕಾರ್ಯಾಚರಣೆ ನಡೆಸಬೇಕು ಎಂದು ಮನವಿ ಮಾಡಿದರು.