ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಒಟ್ಟು 23 ಸಾವಿರ ಮಹಿಳಾ ಮೀನುಗಾರರು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದಿದ್ದ ತಲಾ 50 ಸಾವಿರದಂತೆ ಒಟ್ಟು 62 ಕೋಟಿ ಸಾಲವನ್ನು ಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಆದರೆ ಈ ಯೋಜನೆಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಲು ಬಾಕಿಯಿದ್ದು, ಇನ್ನೂ ಅನುಷ್ಠಾನಗೊಂಡಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸಾಲ ಮನ್ನಾದ ಘೋಷಣೆ ಮಾಡಿದ್ದರೂ ಅದರ ಲಾಭ ನಮಗೆ ಸಿಗುತ್ತಿಲ್ಲ. ಬ್ಯಾಂಕ್ಗಳು ಸಾಲ ಮರುಪಾವತಿಸುವಂತೆ ಒತ್ತಾಯ ಹೇರುತ್ತಿವೆ ಎಂದು ಮಹಿಳಾ ಮೀನುಗಾರರು ಮನವಿ ಮಾಡಿಕೊಂಡಿದ್ದರು ಎಂದರು.