ಉಡುಪಿ: ಶನಿವಾರ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಮಣಿಪಾಲದ ಕೆಎಂಸಿಯ ವೈದ್ಯ ಡಾ.ಸೂರ್ಯನಾರಾಯಣ (26) ಮೃತಪಟ್ಟಿದ್ದಾರೆ.
ಮಣಿಪಾಲದ ಹೋಟೆಲ್ ಹಾಟ್ ಅಂಡ್ ಸ್ಪೈಸಿ ಎದುರುಗಡೆಯ ತಿರುವಿನಲ್ಲಿ ಕಾರು ರಸ್ತೆ ವಿಭಜಕೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಘಟನೆಯಲ್ಲಿ ಸೂರ್ಯನಾರಾಯಣ ಅವರ ತಲೆಗೆ ಗಂಭೀರ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಮಣಿಪಾಲ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮಣಿಪಾಲದಲ್ಲಿ ಶನಿವಾರ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ದೃಶ್ಯ