<p><strong>ಉಡುಪಿ:</strong> ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ನ ಅಂತರ್ ಸಾಂಸ್ಕೃತಿಕ ಅಧ್ಯಯನ ಮತ್ತು ಸಂವಾದ ಕೇಂದ್ರವು ಸಿದ್ಧಪಡಿಸಿರುವ ಯಕ್ಷಗಾನದ ಕುರಿತ ಸಾಕ್ಷ್ಯ ಚಿತ್ರವು ಅಮೆರಿಕದ ಲಾಸ್ಏಂಜಲೀಸ್ನ ಪ್ರತಿಷ್ಠಿತ ವರ್ಲ್ಡ್ ಕಲ್ಚರ್ ಪಿಲ್ಮ್ ಫೆಸ್ಟಿವಲ್-24ರಲ್ಲಿ ಸೆಮಿ ಫೈನಲ್ ಸ್ಪರ್ಧಾ ಹಂತಕ್ಕೆ ಆಯ್ಕೆಯಾಗಿದೆ.</p>.<p>ಚಿತ್ರೋತ್ಸವವು ಜುಲೈ 27 ಮತ್ತು 28ರಂದು ನಡೆಯಲಿದೆ. ಈ ಸಾಕ್ಷ್ಯಚಿತ್ರವನ್ನು ಸಿಐಎಸ್ಡಿಯ ‘ತುಳುನಾಡಿನ ಸಜೀವ ಸಂಸ್ಕೃತಿಗಳು: ಭಾರತದ ಅರಿವು’ ಯೋಜನೆಯ ಭಾಗವಾಗಿ ತಯಾರಿಸಲಾಗಿದೆ.</p>.<p>ಚಿತ್ರೋತ್ಸವಕ್ಕೆ 40 ದೇಶಗಳಿಂದ ಪ್ರವೇಶಗಳು ಬಂದಿದ್ದು, ಈ ಸಾಕ್ಷ್ಯಚಿತ್ರವು ಕರ್ನಾಟಕದ ಕರಾವಳಿ ಜಿಲ್ಲೆಗಳ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಪ್ರಾದೇಶಿಕ ಕಲೆಯಾದ ಯಕ್ಷಗಾನದ ಭವ್ಯ ಪರಂಪರೆ ಎತ್ತಿಹಿಡಿಯುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<p>ಮಾಹೆಯ ಐರೋಪ್ಯ ಅಧ್ಯಯನ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಐಎಸ್ಡಿಯ ಉಪಕ್ರಮವಾಗಿ ‘ಡಿಸರ್ನಿಂಗ್ ಇಂಡಿಯ: ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು’ ಯೋಜನೆ ಕ್ರಿಯಾಶೀಲವಾಗಿದ್ದು, ಇದು ಅಂತರ್ ಸಾಂಸ್ಕೃತಿಕ ಸಂವಾದ ಮತ್ತು ಅರಿವನ್ನು ವಿಸ್ತರಿಸುವಲ್ಲಿ ಆಶಯದತ್ತ ಕೇಂದ್ರೀಕೃತವಾಗಿದೆ ಎಂದು ಹೇಳಿದೆ.</p>.<p>ಸಾಕ್ಷ್ಯಚಿತ್ರವನ್ನು ಪ್ರವೀಣ್ ಶೆಟ್ಟಿ ಮತ್ತು ನಿತೇಶ್ ಅಂಚನ್ ನಿರ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ನ ಅಂತರ್ ಸಾಂಸ್ಕೃತಿಕ ಅಧ್ಯಯನ ಮತ್ತು ಸಂವಾದ ಕೇಂದ್ರವು ಸಿದ್ಧಪಡಿಸಿರುವ ಯಕ್ಷಗಾನದ ಕುರಿತ ಸಾಕ್ಷ್ಯ ಚಿತ್ರವು ಅಮೆರಿಕದ ಲಾಸ್ಏಂಜಲೀಸ್ನ ಪ್ರತಿಷ್ಠಿತ ವರ್ಲ್ಡ್ ಕಲ್ಚರ್ ಪಿಲ್ಮ್ ಫೆಸ್ಟಿವಲ್-24ರಲ್ಲಿ ಸೆಮಿ ಫೈನಲ್ ಸ್ಪರ್ಧಾ ಹಂತಕ್ಕೆ ಆಯ್ಕೆಯಾಗಿದೆ.</p>.<p>ಚಿತ್ರೋತ್ಸವವು ಜುಲೈ 27 ಮತ್ತು 28ರಂದು ನಡೆಯಲಿದೆ. ಈ ಸಾಕ್ಷ್ಯಚಿತ್ರವನ್ನು ಸಿಐಎಸ್ಡಿಯ ‘ತುಳುನಾಡಿನ ಸಜೀವ ಸಂಸ್ಕೃತಿಗಳು: ಭಾರತದ ಅರಿವು’ ಯೋಜನೆಯ ಭಾಗವಾಗಿ ತಯಾರಿಸಲಾಗಿದೆ.</p>.<p>ಚಿತ್ರೋತ್ಸವಕ್ಕೆ 40 ದೇಶಗಳಿಂದ ಪ್ರವೇಶಗಳು ಬಂದಿದ್ದು, ಈ ಸಾಕ್ಷ್ಯಚಿತ್ರವು ಕರ್ನಾಟಕದ ಕರಾವಳಿ ಜಿಲ್ಲೆಗಳ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಪ್ರಾದೇಶಿಕ ಕಲೆಯಾದ ಯಕ್ಷಗಾನದ ಭವ್ಯ ಪರಂಪರೆ ಎತ್ತಿಹಿಡಿಯುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<p>ಮಾಹೆಯ ಐರೋಪ್ಯ ಅಧ್ಯಯನ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಐಎಸ್ಡಿಯ ಉಪಕ್ರಮವಾಗಿ ‘ಡಿಸರ್ನಿಂಗ್ ಇಂಡಿಯ: ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು’ ಯೋಜನೆ ಕ್ರಿಯಾಶೀಲವಾಗಿದ್ದು, ಇದು ಅಂತರ್ ಸಾಂಸ್ಕೃತಿಕ ಸಂವಾದ ಮತ್ತು ಅರಿವನ್ನು ವಿಸ್ತರಿಸುವಲ್ಲಿ ಆಶಯದತ್ತ ಕೇಂದ್ರೀಕೃತವಾಗಿದೆ ಎಂದು ಹೇಳಿದೆ.</p>.<p>ಸಾಕ್ಷ್ಯಚಿತ್ರವನ್ನು ಪ್ರವೀಣ್ ಶೆಟ್ಟಿ ಮತ್ತು ನಿತೇಶ್ ಅಂಚನ್ ನಿರ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>