<p>ಉಡುಪಿ: 6 ವರ್ಷಗಳ ಹಿಂದೆ ಪುಟ್ಟ ಮಕ್ಕಳ ಕಣ್ಣೆದುರೇ ಅತ್ತೆ ಹಾಗೂ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯ ಮೇಲಿನ ಆಪಾದನೆಗಳು ಸಾಬೀತಾಗಿದ್ದು ಫೆ.14ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.</p>.<p>ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೆ.ಎನ್.ಸುಬ್ರಹ್ಮಣ್ಯ ಅವರು ಸಂಜಯ್ ದತ್ (44) ಮೇಲಿನ ಆರೋಪಗಳು ಸಾಬೀತಾಗಿದ್ದು, ದೋಷಿ ಎಂದು ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು.</p>.<p><strong>ಪ್ರಕರಣದ ಹಿನ್ನೆಲೆ:</strong></p>.<p><strong>ಏ.30, 2015ರಂದು ರಾತ್ರಿ</strong> 10.30ಕ್ಕೆ ಚಿಟ್ಪಾಡಿಯ ಕಸ್ತೂರಬಾ ನಗರದಲ್ಲಿ ಸಂಜಯ್ ದತ್ ಎಂಬಾತ ಪತ್ನಿ ಅರ್ಚನಾ ಮೇಲೆ ಕತ್ತಿಯಿಂದ ಹಲ್ಲೆಗೆ ಮುಂದಾದಾಗ ಅತ್ತೆ ನಿರ್ಮಲಾ ಅಡ್ಡ ಬಂದು ತಡೆಯಲು ಯತ್ನಿಸಿದ್ದರು. ಈ ಸಂದರ್ಭ ಕೋಪಗೊಂಡ ಸಂಜಯ್ ದತ್ ಅತ್ತೆಯ ಮೇಲೆ ಕತ್ತಿ ಬೀಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಬಳಿಕ ಪತ್ನಿ ಅರ್ಚನಾಗೂ ಮನಬಂದಂತೆ ಕತ್ತಿಯಿಂದ ಇರಿದಿದ್ದ. ಹಲ್ಲೆ ತಡೆಯಲು ಬಂದ ಸಂಬಂಧಿಗಳ ಮೇಲೂ ದಾಳಿ ಮಾಡಿ ಪರಾರಿಯಾಗಿದ್ದ.</p>.<p>ಆರೋಪಿಯ ಪೈಶಾಚಿಕ ಕೃತ್ಯಗಳು ಮೂವರು ಚಿಕ್ಕ ಮಕ್ಕಳ ಕಣ್ಣೆದುರಿಗೇ ನಡೆದಿತ್ತು. ಘಟನೆಯಲ್ಲಿ ಅತ್ತೆ ನಿರ್ಮಲಾ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಅರ್ಚನಾ ಚಿಕಿತ್ಸೆಗೆ ಸ್ಪಂದಿಸದೆ ಮಣಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಅವಳಿ ಕೊಲೆ ನಡೆದ ಮರುದಿನವೇ ಸಂಜಯ್ದತ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದರು.</p>.<p>ಪ್ರಕರಣದ ತನಿಖೆ ಕೈಗೆತ್ತಿಕೊಂಡ ಅಂದಿನ ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ಶ್ರೀಕಾಂತ್ ಜುಲೈ 14, 2015ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳ ಕಾಲ ವಿಚಾರಣೆ ನಡೆದು, 44 ಸಾಕ್ಷಿಗಳ ಪೈಕಿ 25 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಂಡ ನ್ಯಾಯಾಧೀಶರು ಆರೋಪಿಯ ಕೃತ್ಯಗಳು ಸಾಬೀತಾಗಿವೆ ಎಂದು ಘೋಷಿಸಿದ್ದಾರೆ.</p>.<p>ಆರೋಪಿ ಜಾಮೀನಿಗಾಗಿ ಹಲವು ಬಾರಿ ಅರ್ಜಿ ಸಲ್ಲಿಸಿದರೂ ನ್ಯಾಯಾಲಯ ಸ್ಪಷ್ಟವಾಗಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಪ್ರಕಟವಾಗುವ ಶಿಕ್ಷೆಯ ಪ್ರಮಾಣದ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕಿ ಶಾಂತಿಬಾಯಿ ವಾದ ಮಂಡಿಸಿದರು. ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಕೆ.ಜಯಂತಿ ಹಾಗೂ ಬದರಿನಾಥ ನಾಯರಿ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: 6 ವರ್ಷಗಳ ಹಿಂದೆ ಪುಟ್ಟ ಮಕ್ಕಳ ಕಣ್ಣೆದುರೇ ಅತ್ತೆ ಹಾಗೂ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯ ಮೇಲಿನ ಆಪಾದನೆಗಳು ಸಾಬೀತಾಗಿದ್ದು ಫೆ.14ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.</p>.<p>ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೆ.ಎನ್.ಸುಬ್ರಹ್ಮಣ್ಯ ಅವರು ಸಂಜಯ್ ದತ್ (44) ಮೇಲಿನ ಆರೋಪಗಳು ಸಾಬೀತಾಗಿದ್ದು, ದೋಷಿ ಎಂದು ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು.</p>.<p><strong>ಪ್ರಕರಣದ ಹಿನ್ನೆಲೆ:</strong></p>.<p><strong>ಏ.30, 2015ರಂದು ರಾತ್ರಿ</strong> 10.30ಕ್ಕೆ ಚಿಟ್ಪಾಡಿಯ ಕಸ್ತೂರಬಾ ನಗರದಲ್ಲಿ ಸಂಜಯ್ ದತ್ ಎಂಬಾತ ಪತ್ನಿ ಅರ್ಚನಾ ಮೇಲೆ ಕತ್ತಿಯಿಂದ ಹಲ್ಲೆಗೆ ಮುಂದಾದಾಗ ಅತ್ತೆ ನಿರ್ಮಲಾ ಅಡ್ಡ ಬಂದು ತಡೆಯಲು ಯತ್ನಿಸಿದ್ದರು. ಈ ಸಂದರ್ಭ ಕೋಪಗೊಂಡ ಸಂಜಯ್ ದತ್ ಅತ್ತೆಯ ಮೇಲೆ ಕತ್ತಿ ಬೀಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಬಳಿಕ ಪತ್ನಿ ಅರ್ಚನಾಗೂ ಮನಬಂದಂತೆ ಕತ್ತಿಯಿಂದ ಇರಿದಿದ್ದ. ಹಲ್ಲೆ ತಡೆಯಲು ಬಂದ ಸಂಬಂಧಿಗಳ ಮೇಲೂ ದಾಳಿ ಮಾಡಿ ಪರಾರಿಯಾಗಿದ್ದ.</p>.<p>ಆರೋಪಿಯ ಪೈಶಾಚಿಕ ಕೃತ್ಯಗಳು ಮೂವರು ಚಿಕ್ಕ ಮಕ್ಕಳ ಕಣ್ಣೆದುರಿಗೇ ನಡೆದಿತ್ತು. ಘಟನೆಯಲ್ಲಿ ಅತ್ತೆ ನಿರ್ಮಲಾ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಅರ್ಚನಾ ಚಿಕಿತ್ಸೆಗೆ ಸ್ಪಂದಿಸದೆ ಮಣಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಅವಳಿ ಕೊಲೆ ನಡೆದ ಮರುದಿನವೇ ಸಂಜಯ್ದತ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದರು.</p>.<p>ಪ್ರಕರಣದ ತನಿಖೆ ಕೈಗೆತ್ತಿಕೊಂಡ ಅಂದಿನ ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ಶ್ರೀಕಾಂತ್ ಜುಲೈ 14, 2015ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳ ಕಾಲ ವಿಚಾರಣೆ ನಡೆದು, 44 ಸಾಕ್ಷಿಗಳ ಪೈಕಿ 25 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಂಡ ನ್ಯಾಯಾಧೀಶರು ಆರೋಪಿಯ ಕೃತ್ಯಗಳು ಸಾಬೀತಾಗಿವೆ ಎಂದು ಘೋಷಿಸಿದ್ದಾರೆ.</p>.<p>ಆರೋಪಿ ಜಾಮೀನಿಗಾಗಿ ಹಲವು ಬಾರಿ ಅರ್ಜಿ ಸಲ್ಲಿಸಿದರೂ ನ್ಯಾಯಾಲಯ ಸ್ಪಷ್ಟವಾಗಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಪ್ರಕಟವಾಗುವ ಶಿಕ್ಷೆಯ ಪ್ರಮಾಣದ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕಿ ಶಾಂತಿಬಾಯಿ ವಾದ ಮಂಡಿಸಿದರು. ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಕೆ.ಜಯಂತಿ ಹಾಗೂ ಬದರಿನಾಥ ನಾಯರಿ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>