ಪ್ರಕರಣದ ತನಿಖೆ ಕೈಗೆತ್ತಿಕೊಂಡ ಅಂದಿನ ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ಶ್ರೀಕಾಂತ್ ಜುಲೈ 14, 2015ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳ ಕಾಲ ವಿಚಾರಣೆ ನಡೆದು, 44 ಸಾಕ್ಷಿಗಳ ಪೈಕಿ 25 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಂಡ ನ್ಯಾಯಾಧೀಶರು ಆರೋಪಿಯ ಕೃತ್ಯಗಳು ಸಾಬೀತಾಗಿವೆ ಎಂದು ಘೋಷಿಸಿದ್ದಾರೆ.