ಸ್ನೇಹಿತರು ತಡರಾತ್ರಿ ಅಜೇಂದ್ರ ಶೆಟ್ಟಿಯ ಫೈನಾನ್ಸ್ ಕಚೇರಿಗೆ ಹೋಗಿ ಪರಿಶೀಲಿಸಿದಾಗ ಸೋಫಾದ ಮೇಲೆ ಅಜೇಂದ್ರ ಶೆಟ್ಟಿ ರಕ್ತದ ಮಡುವಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸಹೋದರ ಮಹೇಂದ್ರ ಅವರಿಗೆ ಕರೆಮಾಡಿ ವಿಷಯ ತಿಳಿಸಿದ ಸ್ನೇಹಿತರು, ಅಜೇಂದ್ರರನ್ನು ಕೋಟೇಶ್ವರದ ಎನ್ಆರ್ ಆಚಾರ್ಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.