<p><strong>ಉಡುಪಿ: </strong>ಮದ್ಯ ಮಾರಾಟ ಆರಂಭವಾದ ಬಳಿಕ ನಗರದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಮದ್ಯ ವ್ಯಸನಿಗಳು ಕಂಠಪೂರ್ತಿ ಕುಡಿದು ಅಮಲಿನಲ್ಲಿ ನಗರದ ಹಲವೆಡೆ ತೂರಾಡುತ್ತಿದ್ದಾರೆ. ಶ್ರೀಕೃಷ್ಣಮಠದ ರಥಬೀದಿ, ಮಠದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳ ಮುಂದೆ ಬಿದ್ದು ಹೊರಳಾಡುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ.</p>.<p>ಲಾಕ್ಡೌನ್ ಜಾರಿಯಾದ ಬಳಿಕ ಮದ್ಯ ಮಾರಾಟಕ್ಕೆ ನಿಷೇಧವಿದ್ದ ಪರಿಣಾಮ ನಗರದಲ್ಲಿ ಕುಡುಕರು ಕಣ್ಣಿಗೆ ಬಿದ್ದಿರಲಿಲ್ಲ. ಈಗ ಮತ್ತೆ ಮದ್ಯ ಮಾರಾಟ ಆರಂಭವಾಗಿರುವುದರಿಂದ ವ್ಯಸನಿಗಳ ಹಾವಳಿ ಶುರುವಾಗಿದೆ. ಬೆಳಿಗ್ಗೆಯೇ ಮದ್ಯಸೇವಿಸಿ ನಗರದಲ್ಲಿ ತೂರಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.</p>.<p>ಉಡುಪಿಯಲ್ಲಿ ನೂರಾರು ನಿರ್ಗತಿಕರು, ಭಿಕ್ಷುಕರಿದ್ದು ಇವರಲ್ಲಿ ಬಹುತೇಕರು ಮದ್ಯಕ್ಕೆ ದಾಸರಾದವರಿದ್ದಾರೆ. ಲಾಕ್ಡೌನ್ಗೂ ಮುನ್ನ ಪ್ರತಿದಿನ ಭಿಕ್ಷೆಬೇಡಿ, ಸಣ್ಣಪುಟ್ಟ ಕೆಲಸ ಮಾಡಿ ಬಂದ ಹಣದಲ್ಲಿ ಮದ್ಯಸೇವಿಸಿ ಉದ್ಯಾನ, ಪಾದಚಾರಿ ಮಾರ್ಗ, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ಟೆಂಟ್, ಶೆಡ್ಗಳಲ್ಲಿ ಮಲಗುತ್ತಿದ್ದರು.</p>.<p>ಲಾಕ್ಡೌನ್ ಬಳಿಕ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದ್ದರಿಂದ ಇವರೆಲ್ಲರೂ ತಾತ್ಕಾಲಿಕ ನಿರಾಶ್ರಿತರ ಕೇಂದ್ರ, ಬೀಡಿನಗುಡ್ಡೆ ನಿರ್ಜನ ಪ್ರದೇಶ ಹಾಗೂ ಶೆಡ್ಗಳಲ್ಲಿ ಉಳಿದುಕೊಂಡಿದ್ದರು. ಕೆಲವು ಸಂಘ ಸಂಸ್ಥೆಗಳು ನಿತ್ಯ ಇವರಿಗೆ ಊಟದ ವ್ಯವಸ್ಥೆ ಮಾಡಿದ್ದವು.</p>.<p>ಈಗ ಮದ್ಯ ಮಾರಾಟ ಆರಂಭವಾಗಿರುವುದರಿಂದ ಮತ್ತೆ ವ್ಯಸನ ಶುರುಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳು ಸಹ ತೆರೆದಿರುವುದರಿಂದ ಭಿಕ್ಷೆಯೂ ಸಿಗುತ್ತಿದ್ದು ಮದ್ಯ ಸೇವಿಸುತ್ತಿದ್ದಾರೆ ಎನ್ನುತ್ತಾರೆ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು.</p>.<p>ಲಾಕ್ಡೌನ್ ಅವಧಿಯಲ್ಲಿ ರಥಬೀದಿಯಲ್ಲಿ ಕುಡುಕರು ಕಾಣಸಿಗುತ್ತಿರಲಿಲ್ಲ. ಎರಡು ದಿನಗಳಿಂದ ಹಾವಳಿ ಶುರುವಾಗಿದೆ. ಕುಡಿದುಪಾದಚಾರಿ ಮಾರ್ಗಗಳಲ್ಲೇ ಮಲಗುತ್ತಿದ್ದು, ಸಾರ್ವಜನಿಕರಿಗೆ, ಭಕ್ತರಿಗೆ ಕಿರಿಕಿರಿ ಉಂಟಾಗುತ್ತಿದೆ.</p>.<p>ಸುಮ್ಮನೆ ಬೊಬ್ಬಿಡುವುದು, ಅಶ್ಲೀಲ ಪದಗಳಿಂದ ನಿಂದಿಸುವುದು, ಹೊಡೆದಾಟ ಮಾಡಿಕೊಳ್ಳುತ್ತಿದ್ದಾರೆ. ಮಲಗಿದ್ದಲ್ಲಿಯೇ ವಾಂತಿ, ಮಲ–ಮೂತ್ರ ಮಾಡಿಕೊಂಡು ಸುತ್ತಲಿನ ಪರಿಸರ ಹಾಳು ಮಾಡುತ್ತಿದ್ದಾರೆ. ಎಲ್ಲಿ ಬೇಕೆಂದರಲ್ಲಿ ಉಗಿಯುತ್ತಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಾರೆ ಸಮಿತಿಯ ತಾರಾನಾಥ್ ಮೇಸ್ತ ಶಿರೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಮದ್ಯ ಮಾರಾಟ ಆರಂಭವಾದ ಬಳಿಕ ನಗರದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಮದ್ಯ ವ್ಯಸನಿಗಳು ಕಂಠಪೂರ್ತಿ ಕುಡಿದು ಅಮಲಿನಲ್ಲಿ ನಗರದ ಹಲವೆಡೆ ತೂರಾಡುತ್ತಿದ್ದಾರೆ. ಶ್ರೀಕೃಷ್ಣಮಠದ ರಥಬೀದಿ, ಮಠದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳ ಮುಂದೆ ಬಿದ್ದು ಹೊರಳಾಡುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ.</p>.<p>ಲಾಕ್ಡೌನ್ ಜಾರಿಯಾದ ಬಳಿಕ ಮದ್ಯ ಮಾರಾಟಕ್ಕೆ ನಿಷೇಧವಿದ್ದ ಪರಿಣಾಮ ನಗರದಲ್ಲಿ ಕುಡುಕರು ಕಣ್ಣಿಗೆ ಬಿದ್ದಿರಲಿಲ್ಲ. ಈಗ ಮತ್ತೆ ಮದ್ಯ ಮಾರಾಟ ಆರಂಭವಾಗಿರುವುದರಿಂದ ವ್ಯಸನಿಗಳ ಹಾವಳಿ ಶುರುವಾಗಿದೆ. ಬೆಳಿಗ್ಗೆಯೇ ಮದ್ಯಸೇವಿಸಿ ನಗರದಲ್ಲಿ ತೂರಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.</p>.<p>ಉಡುಪಿಯಲ್ಲಿ ನೂರಾರು ನಿರ್ಗತಿಕರು, ಭಿಕ್ಷುಕರಿದ್ದು ಇವರಲ್ಲಿ ಬಹುತೇಕರು ಮದ್ಯಕ್ಕೆ ದಾಸರಾದವರಿದ್ದಾರೆ. ಲಾಕ್ಡೌನ್ಗೂ ಮುನ್ನ ಪ್ರತಿದಿನ ಭಿಕ್ಷೆಬೇಡಿ, ಸಣ್ಣಪುಟ್ಟ ಕೆಲಸ ಮಾಡಿ ಬಂದ ಹಣದಲ್ಲಿ ಮದ್ಯಸೇವಿಸಿ ಉದ್ಯಾನ, ಪಾದಚಾರಿ ಮಾರ್ಗ, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ಟೆಂಟ್, ಶೆಡ್ಗಳಲ್ಲಿ ಮಲಗುತ್ತಿದ್ದರು.</p>.<p>ಲಾಕ್ಡೌನ್ ಬಳಿಕ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದ್ದರಿಂದ ಇವರೆಲ್ಲರೂ ತಾತ್ಕಾಲಿಕ ನಿರಾಶ್ರಿತರ ಕೇಂದ್ರ, ಬೀಡಿನಗುಡ್ಡೆ ನಿರ್ಜನ ಪ್ರದೇಶ ಹಾಗೂ ಶೆಡ್ಗಳಲ್ಲಿ ಉಳಿದುಕೊಂಡಿದ್ದರು. ಕೆಲವು ಸಂಘ ಸಂಸ್ಥೆಗಳು ನಿತ್ಯ ಇವರಿಗೆ ಊಟದ ವ್ಯವಸ್ಥೆ ಮಾಡಿದ್ದವು.</p>.<p>ಈಗ ಮದ್ಯ ಮಾರಾಟ ಆರಂಭವಾಗಿರುವುದರಿಂದ ಮತ್ತೆ ವ್ಯಸನ ಶುರುಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳು ಸಹ ತೆರೆದಿರುವುದರಿಂದ ಭಿಕ್ಷೆಯೂ ಸಿಗುತ್ತಿದ್ದು ಮದ್ಯ ಸೇವಿಸುತ್ತಿದ್ದಾರೆ ಎನ್ನುತ್ತಾರೆ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು.</p>.<p>ಲಾಕ್ಡೌನ್ ಅವಧಿಯಲ್ಲಿ ರಥಬೀದಿಯಲ್ಲಿ ಕುಡುಕರು ಕಾಣಸಿಗುತ್ತಿರಲಿಲ್ಲ. ಎರಡು ದಿನಗಳಿಂದ ಹಾವಳಿ ಶುರುವಾಗಿದೆ. ಕುಡಿದುಪಾದಚಾರಿ ಮಾರ್ಗಗಳಲ್ಲೇ ಮಲಗುತ್ತಿದ್ದು, ಸಾರ್ವಜನಿಕರಿಗೆ, ಭಕ್ತರಿಗೆ ಕಿರಿಕಿರಿ ಉಂಟಾಗುತ್ತಿದೆ.</p>.<p>ಸುಮ್ಮನೆ ಬೊಬ್ಬಿಡುವುದು, ಅಶ್ಲೀಲ ಪದಗಳಿಂದ ನಿಂದಿಸುವುದು, ಹೊಡೆದಾಟ ಮಾಡಿಕೊಳ್ಳುತ್ತಿದ್ದಾರೆ. ಮಲಗಿದ್ದಲ್ಲಿಯೇ ವಾಂತಿ, ಮಲ–ಮೂತ್ರ ಮಾಡಿಕೊಂಡು ಸುತ್ತಲಿನ ಪರಿಸರ ಹಾಳು ಮಾಡುತ್ತಿದ್ದಾರೆ. ಎಲ್ಲಿ ಬೇಕೆಂದರಲ್ಲಿ ಉಗಿಯುತ್ತಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಾರೆ ಸಮಿತಿಯ ತಾರಾನಾಥ್ ಮೇಸ್ತ ಶಿರೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>