<p><strong>ಬ್ರಹ್ಮಾವರ</strong>: ಬಾರ್ಕೂರು ಹನೆಹಳ್ಳಿ ಗ್ರಾಮದ ಮೂಡುತೋಟ ನಿವಾಸಿ, ಪರಿಶಿಷ್ಟ ಜನಾಂಗದ ಕೃಷ್ಣ ಅವರ ಕೊಲೆ ಪ್ರಕರಣ ನಡೆದು 3 ತಿಂಗಳು ಕಳೆದರೂ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ವಿಫಲವಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳದ ಆಶ್ರಯದಲ್ಲಿ ಬುಧವಾರ ಬ್ರಹ್ಮಾವರದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಸಿಐಟಿಯು ಮುಖಂಡ ಬಾಲಕೃಷ್ಣ ಮಾತನಾಡಿ, ಅನ್ಯಾಯವಾದಾಗ ಶ್ರೀಮಂತರಿಗೆ ಒಂದು ನ್ಯಾಯ, ದಲಿತರಿಗೆ, ಬಡವರಿಗೆ ಒಂದು ನ್ಯಾಯ ಸಲ್ಲದು. ಎಂತಹ ಕೊಲೆ ಪ್ರಕರಣವನ್ನೂ ಭೇದಿಸಲಾಗುತ್ತದೆ. ಚಿಕ್ಕ ಹಳ್ಳಿಯಲ್ಲಿ ನಡೆದ ಈ ಪ್ರಕರಣ ಇನ್ನೂ ಕಂಡು ಹಿಡಿಯದಿರುವುದು ಆಶ್ಚರ್ಯಕರ ಸಂಗತಿ. ಇಲಾಖೆ ತ್ವರಿತವಾಗಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ಮಾತನಾಡಿ, ಹನೆಹಳ್ಳಿಯ ಪ್ರಕರಣ ಕುರಿತು ಸರಿಯಾದ ತನಿಖೆ ನಡೆಯಲೇ ಇಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದಾರೆ. ಉನ್ನತ ಮಟ್ಟದ ತನಿಖೆಗಾಗಿ ಸಿಒಡಿಗೆ ನೀಡಬೇಕು. ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.</p>.<p>ಜಿಲ್ಲಾ ಪ್ರಧಾನ ರ್ಕಾಯದರ್ಶಿ ಶ್ರೀನಿವಾಸ ನಡೂರು, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಶಿರಿಯಾರ ಮಾತನಾಡಿದರು. ನಂತರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಆರೋಪಿಗಳನ್ನು ಬಂಧಿಸುವಂತೆ ಮನವಿ ನೀಡಲಾಯಿತು. ಸಮತಾ ಸೈನಿಕ ದಳದ ಪದಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.</p>.<p>ಮೂಡುತೋಟದ ಹನೆಹಳ್ಳಿ ಕೃಷ್ಣ ಎಂಬುವರನ್ನು ಕಳೆದ ಮಾರ್ಚ್ 2ರಂದು ರಾತ್ರಿ ಮನೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ</strong>: ಬಾರ್ಕೂರು ಹನೆಹಳ್ಳಿ ಗ್ರಾಮದ ಮೂಡುತೋಟ ನಿವಾಸಿ, ಪರಿಶಿಷ್ಟ ಜನಾಂಗದ ಕೃಷ್ಣ ಅವರ ಕೊಲೆ ಪ್ರಕರಣ ನಡೆದು 3 ತಿಂಗಳು ಕಳೆದರೂ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ವಿಫಲವಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳದ ಆಶ್ರಯದಲ್ಲಿ ಬುಧವಾರ ಬ್ರಹ್ಮಾವರದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಸಿಐಟಿಯು ಮುಖಂಡ ಬಾಲಕೃಷ್ಣ ಮಾತನಾಡಿ, ಅನ್ಯಾಯವಾದಾಗ ಶ್ರೀಮಂತರಿಗೆ ಒಂದು ನ್ಯಾಯ, ದಲಿತರಿಗೆ, ಬಡವರಿಗೆ ಒಂದು ನ್ಯಾಯ ಸಲ್ಲದು. ಎಂತಹ ಕೊಲೆ ಪ್ರಕರಣವನ್ನೂ ಭೇದಿಸಲಾಗುತ್ತದೆ. ಚಿಕ್ಕ ಹಳ್ಳಿಯಲ್ಲಿ ನಡೆದ ಈ ಪ್ರಕರಣ ಇನ್ನೂ ಕಂಡು ಹಿಡಿಯದಿರುವುದು ಆಶ್ಚರ್ಯಕರ ಸಂಗತಿ. ಇಲಾಖೆ ತ್ವರಿತವಾಗಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ಮಾತನಾಡಿ, ಹನೆಹಳ್ಳಿಯ ಪ್ರಕರಣ ಕುರಿತು ಸರಿಯಾದ ತನಿಖೆ ನಡೆಯಲೇ ಇಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದಾರೆ. ಉನ್ನತ ಮಟ್ಟದ ತನಿಖೆಗಾಗಿ ಸಿಒಡಿಗೆ ನೀಡಬೇಕು. ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.</p>.<p>ಜಿಲ್ಲಾ ಪ್ರಧಾನ ರ್ಕಾಯದರ್ಶಿ ಶ್ರೀನಿವಾಸ ನಡೂರು, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಶಿರಿಯಾರ ಮಾತನಾಡಿದರು. ನಂತರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಆರೋಪಿಗಳನ್ನು ಬಂಧಿಸುವಂತೆ ಮನವಿ ನೀಡಲಾಯಿತು. ಸಮತಾ ಸೈನಿಕ ದಳದ ಪದಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.</p>.<p>ಮೂಡುತೋಟದ ಹನೆಹಳ್ಳಿ ಕೃಷ್ಣ ಎಂಬುವರನ್ನು ಕಳೆದ ಮಾರ್ಚ್ 2ರಂದು ರಾತ್ರಿ ಮನೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>