<p><strong>ಉಡುಪಿ: </strong>ನಿವೃತ್ತ ಪೊಲೀಸ್ ಸಿಬ್ಬಂದಿಗೆ ಸಿಗುತ್ತಿರುವ ವೈದ್ಯಕೀಯ ಸೌಲಭ್ಯಗಳು ಸೀಮಿತ ಆಸ್ಪತ್ರೆಗಳಲ್ಲಿ ಮಾತ್ರ ಸಿಗುತ್ತಿದ್ದು, ಮಣಿಪಾಲದ ಕೆಎಂಸಿ ಹಾಗೂ ಟಿಎಂಎ ಪೈ ನಂತಹ ಆಸ್ಪತ್ರೆಗಳಲ್ಲಿಯೂ ಸಿಗುವಂತಾಗಬೇಕು ಎಂದು ಸಶಸ್ತ್ರ ಮೀಸಲು ಪಡೆಯ ನಿವೃತ್ತ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಎ.ಚಂದ್ರಶೇಖರ್ ಮನವಿ ಮಾಡಿದರು.</p>.<p>ಜಿಲ್ಲಾ ಪೊಲೀಸ್ ಇಲಾಖೆಯಿಂದ ಶುಕ್ರವಾರ ಚಂದು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.</p>.<p>ಪೊಲೀಸ್ ಇಲಾಖೆಯಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸಾಧ್ಯವಾಗುವುದಿಲ್ಲ. ಸಿಬ್ಬಂದಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಎಸ್ಪಿ ಎನ್.ವಿಷ್ಣುವರ್ಧನ್ ಮಾತನಾಡಿ, 2020-21ನೇ ಸಾಲಿನಲ್ಲಿ 52 ಮಂದಿ ನಿವೃತ್ತ ಪೊಲೀಸರಿಗೆ ₹ 4.64 ಲಕ್ಷ ವೈದ್ಯಕೀಯ ನೆರವು ನೀಡಲಾಗಿದೆ. ಪೊಲೀಸ್ ಸಹಕಾರಿ ಸಂಘದಿಂದ ಇದುವರೆಗೆ 1,016 ಮಂದಿಗೆ ಸಾಲ ವಿತರಿಸಲಾಗಿದ್ದು, ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳಿಗೆ ಬೆಂಬಲ ನೀಡಲಾಗುತ್ತಿದೆ ಎಂದರು.</p>.<p>2020ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಉಡುಪಿಯ ಸೆನ್ ಠಾಣೆಯ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಶಸ್ತ್ರ ಮೀಸಲು ಪಡೆಯ ಶಂಕರ್ ಅವರಿಗೆ ಎಂದು ಎಸ್ಪಿ ಅಭಿನಂದಿಸಿದರು.</p>.<p>ಸಶಸ್ತ್ರ ಮೀಸಲು ಪಡೆಯ ಐದು ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಹೆಚ್ಚುವರಿ ಎಸ್ಪಿ ಕುಮಾರಚಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ನಿವೃತ್ತ ಪೊಲೀಸ್ ಸಿಬ್ಬಂದಿಗೆ ಸಿಗುತ್ತಿರುವ ವೈದ್ಯಕೀಯ ಸೌಲಭ್ಯಗಳು ಸೀಮಿತ ಆಸ್ಪತ್ರೆಗಳಲ್ಲಿ ಮಾತ್ರ ಸಿಗುತ್ತಿದ್ದು, ಮಣಿಪಾಲದ ಕೆಎಂಸಿ ಹಾಗೂ ಟಿಎಂಎ ಪೈ ನಂತಹ ಆಸ್ಪತ್ರೆಗಳಲ್ಲಿಯೂ ಸಿಗುವಂತಾಗಬೇಕು ಎಂದು ಸಶಸ್ತ್ರ ಮೀಸಲು ಪಡೆಯ ನಿವೃತ್ತ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಎ.ಚಂದ್ರಶೇಖರ್ ಮನವಿ ಮಾಡಿದರು.</p>.<p>ಜಿಲ್ಲಾ ಪೊಲೀಸ್ ಇಲಾಖೆಯಿಂದ ಶುಕ್ರವಾರ ಚಂದು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.</p>.<p>ಪೊಲೀಸ್ ಇಲಾಖೆಯಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸಾಧ್ಯವಾಗುವುದಿಲ್ಲ. ಸಿಬ್ಬಂದಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಎಸ್ಪಿ ಎನ್.ವಿಷ್ಣುವರ್ಧನ್ ಮಾತನಾಡಿ, 2020-21ನೇ ಸಾಲಿನಲ್ಲಿ 52 ಮಂದಿ ನಿವೃತ್ತ ಪೊಲೀಸರಿಗೆ ₹ 4.64 ಲಕ್ಷ ವೈದ್ಯಕೀಯ ನೆರವು ನೀಡಲಾಗಿದೆ. ಪೊಲೀಸ್ ಸಹಕಾರಿ ಸಂಘದಿಂದ ಇದುವರೆಗೆ 1,016 ಮಂದಿಗೆ ಸಾಲ ವಿತರಿಸಲಾಗಿದ್ದು, ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳಿಗೆ ಬೆಂಬಲ ನೀಡಲಾಗುತ್ತಿದೆ ಎಂದರು.</p>.<p>2020ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಉಡುಪಿಯ ಸೆನ್ ಠಾಣೆಯ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಶಸ್ತ್ರ ಮೀಸಲು ಪಡೆಯ ಶಂಕರ್ ಅವರಿಗೆ ಎಂದು ಎಸ್ಪಿ ಅಭಿನಂದಿಸಿದರು.</p>.<p>ಸಶಸ್ತ್ರ ಮೀಸಲು ಪಡೆಯ ಐದು ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಹೆಚ್ಚುವರಿ ಎಸ್ಪಿ ಕುಮಾರಚಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>