<p><strong>ಕುಂದಾಪುರ</strong>: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದ ಮರು ಮೌಲ್ಯಮಾಪನದಲ್ಲಿ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ವಿಕೆಆರ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ್ ಅವರ ಮನೆಗೆ ತೆರಳಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಅವರನ್ನು ಗೌರವಿಸಿದ್ದಾರೆ.</p>.<p>ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಸನ್ಮಾನಿಸಿದರು. ಸಾಯಿಸ್ಪರ್ಶ ಅವರು ನಗರದ ಖಾರ್ವಿಕೇರಿಯ ದೇವದಾಸ್, ಶಶಿಕಲಾ ದಂಪತಿ ಪುತ್ರಿ.</p>.<p>ಚಂದ್ರಶೇಖರ್ ಶೆಟ್ಟಿ ಮಾತನಾಡಿ, ಸಾಯಿಸ್ಪರ್ಶ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಕುಂದಾಪುರ ಶಿಕ್ಷಣ ವಲಯ, ಉಡುಪಿ ಜಿಲ್ಲೆಗೆ ಹೆಮ್ಮೆಯ ವಿಷಯ. ಅವರ ಮುಂದಿನ ಶೈಕ್ಷಣಿಕ ಭವಿಷ್ಯ ಉತ್ತಮವಾಗಿರಲಿ. ಸಾಧನೆಗೆ ಕಾರಣವಾದ ಪೋಷಕರು, ಶಾಲೆಯ ಶಿಕ್ಷಕರು ಅಭಿನಂದನಾರ್ಹರು ಎಂದರು.</p>.<p>ವಲಯದ ಎಸ್ಎಸ್ಎಲ್ಸಿ ನೋಡಲ್ ಶೇಖರ್ ಪಡುಕೋಣೆ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong>: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದ ಮರು ಮೌಲ್ಯಮಾಪನದಲ್ಲಿ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ವಿಕೆಆರ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ್ ಅವರ ಮನೆಗೆ ತೆರಳಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಅವರನ್ನು ಗೌರವಿಸಿದ್ದಾರೆ.</p>.<p>ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಸನ್ಮಾನಿಸಿದರು. ಸಾಯಿಸ್ಪರ್ಶ ಅವರು ನಗರದ ಖಾರ್ವಿಕೇರಿಯ ದೇವದಾಸ್, ಶಶಿಕಲಾ ದಂಪತಿ ಪುತ್ರಿ.</p>.<p>ಚಂದ್ರಶೇಖರ್ ಶೆಟ್ಟಿ ಮಾತನಾಡಿ, ಸಾಯಿಸ್ಪರ್ಶ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಕುಂದಾಪುರ ಶಿಕ್ಷಣ ವಲಯ, ಉಡುಪಿ ಜಿಲ್ಲೆಗೆ ಹೆಮ್ಮೆಯ ವಿಷಯ. ಅವರ ಮುಂದಿನ ಶೈಕ್ಷಣಿಕ ಭವಿಷ್ಯ ಉತ್ತಮವಾಗಿರಲಿ. ಸಾಧನೆಗೆ ಕಾರಣವಾದ ಪೋಷಕರು, ಶಾಲೆಯ ಶಿಕ್ಷಕರು ಅಭಿನಂದನಾರ್ಹರು ಎಂದರು.</p>.<p>ವಲಯದ ಎಸ್ಎಸ್ಎಲ್ಸಿ ನೋಡಲ್ ಶೇಖರ್ ಪಡುಕೋಣೆ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>