<p><strong>ಶಿರ್ವ:</strong> ಜಿಲ್ಲಾಡಳಿತ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಉಡುಪಿ, ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಹಾಗೂ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ - ಕೇರಳದ ಆಶ್ರಯದಲ್ಲಿ ‘ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ’ವನ್ನು ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ಆರಂಭಿಸಲಾಯಿತು.</p>.<p>ತಹಶೀಲ್ದಾರ್ ಪ್ರತಿಭಾ ಆರ್. ಅವರು, ಡೋಲು ಬಡಿದು, ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ‘ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಬೆಳವಣಿಗೆ ಪೂರಕವಾಗಬಲ್ಲದು’ ಎಂದರು.</p>.<p>ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಸಂಯೋಜಕ ಪುತ್ರನ್ ಹೆಬ್ರಿ, ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಶಿಬಿರಾರ್ಥಿಗಳ ಪ್ರತಿನಿಧಿಗಳಾಗಿ ಹರಿಣಾಕ್ಷಿ, ನಿಶಾಂತ್ ಇದ್ದರು.</p>.<p>ಪರಿಸರ ಶಿಕ್ಷಣ ಶಿಕ್ಷಕಿ ದೀಪ್ತಿ ಮಾತನಾಡಿ, ‘ಪರಿಸರದ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಮಕ್ಕಳು ಚಿಕ್ಕವಯಸ್ಸಿನಲ್ಲೇ ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕೃಷ್ಣಪ್ಪ ಬಂಬಿಲ ಅವರು, ಮಕ್ಕಳಿಗೆ ನಾಯಕತ್ವ ತರಬೇತಿ ಹಾಗೂ ರಂಗ ತರಬೇತಿ ನೀಡಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಬಿತಾ ಗುಂಡ್ಮಿ, ಸಮುದಾಯದ ಪರಿಚಯ ಮಾಡುವುದರ ಜೊತೆಗೆ ಸಮಸ್ಯೆಗಳು ಹೇಗೆ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಉಮೇಶ್ ಅವರು, ಮಕ್ಕಳಿಗೆ ಸುಲಭ ವಿಧಾನದಲ್ಲಿ ಚಿತ್ರ ಬಿಡಿಸುವುದನ್ನು ಹೇಳಿಕೊಟ್ಟರು. ಶಿಬಿರಾರ್ಥಿ ವಲ್ಮ ಸ್ವಾಗತಿಸಿದರು. ಸಮುದಾಯ ಕಾರ್ಯಕರ್ತ ಸುಪ್ರಿಯಾ ಎಸ್. ಕಿನ್ನಿಗೋಳಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರ್ವ:</strong> ಜಿಲ್ಲಾಡಳಿತ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಉಡುಪಿ, ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಹಾಗೂ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ - ಕೇರಳದ ಆಶ್ರಯದಲ್ಲಿ ‘ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ’ವನ್ನು ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ಆರಂಭಿಸಲಾಯಿತು.</p>.<p>ತಹಶೀಲ್ದಾರ್ ಪ್ರತಿಭಾ ಆರ್. ಅವರು, ಡೋಲು ಬಡಿದು, ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ‘ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಬೆಳವಣಿಗೆ ಪೂರಕವಾಗಬಲ್ಲದು’ ಎಂದರು.</p>.<p>ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಸಂಯೋಜಕ ಪುತ್ರನ್ ಹೆಬ್ರಿ, ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಶಿಬಿರಾರ್ಥಿಗಳ ಪ್ರತಿನಿಧಿಗಳಾಗಿ ಹರಿಣಾಕ್ಷಿ, ನಿಶಾಂತ್ ಇದ್ದರು.</p>.<p>ಪರಿಸರ ಶಿಕ್ಷಣ ಶಿಕ್ಷಕಿ ದೀಪ್ತಿ ಮಾತನಾಡಿ, ‘ಪರಿಸರದ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಮಕ್ಕಳು ಚಿಕ್ಕವಯಸ್ಸಿನಲ್ಲೇ ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕೃಷ್ಣಪ್ಪ ಬಂಬಿಲ ಅವರು, ಮಕ್ಕಳಿಗೆ ನಾಯಕತ್ವ ತರಬೇತಿ ಹಾಗೂ ರಂಗ ತರಬೇತಿ ನೀಡಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಬಿತಾ ಗುಂಡ್ಮಿ, ಸಮುದಾಯದ ಪರಿಚಯ ಮಾಡುವುದರ ಜೊತೆಗೆ ಸಮಸ್ಯೆಗಳು ಹೇಗೆ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಉಮೇಶ್ ಅವರು, ಮಕ್ಕಳಿಗೆ ಸುಲಭ ವಿಧಾನದಲ್ಲಿ ಚಿತ್ರ ಬಿಡಿಸುವುದನ್ನು ಹೇಳಿಕೊಟ್ಟರು. ಶಿಬಿರಾರ್ಥಿ ವಲ್ಮ ಸ್ವಾಗತಿಸಿದರು. ಸಮುದಾಯ ಕಾರ್ಯಕರ್ತ ಸುಪ್ರಿಯಾ ಎಸ್. ಕಿನ್ನಿಗೋಳಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>