ಬಡವರು, ಕಾರ್ಮಿಕರು, ರೈತರು, ಮಹಿಳೆಯರು, ಮಕ್ಕಳು, ಸಣ್ಣಪುಟ್ಟ ವ್ಯಾಪಾರಿಗಳು, ಸ್ವಉದ್ಯೋಗಿಗಳು, ಉದ್ಯೋಗಿಗಳು ಕಂಗಾಲಾಗಿದ್ದಾರೆ. ಕಾರ್ಮಿಕರಂತೂ ಅಕ್ಷರಶಃ ಬೀದಿಪಾಲಾಗಿದ್ದಾರೆ. ಈ ಸ್ಥಿತಿಯಲ್ಲಿ ಈದ್ ಆಚರಣೆ ಹೇಗೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಸಂದರ್ಭದಲ್ಲಿ ನಮ್ಮೊಳಗಿನ ಮಾನವೀಯ ಕಳಕಳಿಯನ್ನು ಇನ್ನಷ್ಟು ಬಲಪಡಿಸಿಕೊಂಡು ಈ ಬಾರಿಯ ಈದ್ ಆಚರಿಸೋಣ.