ಉಡುಪಿ: ಅ.11ರಂದು ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
110 ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮುಂಡ್ಲಿ ಫೀಡರ್ನಲ್ಲಿ ನಿರ್ವಹಣೆ ಕಾರ್ಯದ ಕಾರಣ 11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಂಡ್ಲಿ, ದುರ್ಗ, ತೆಳ್ಳಾರ್, ಪೊಲ್ಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನಿಟ್ಟೂರಿನಲ್ಲಿರುವ ಪರಿವರ್ತಕ ಉನ್ನತೀಕರಿಸುವ ಕಾಮಗಾರಿ ಕಾರಣ ಉಡುಪಿಯ ಅಂಬಲಪಾಡಿ, ಕಿನ್ನಿಮುಲ್ಕಿ, ಕನ್ನರ್ಪಾಡಿ, ಅಜ್ಜರಕಾಡು, ಬನ್ನಂಜೆ, ಕೊಡವೂರು, ಆದಿ ಉಡುಪಿ, ಮೂಡಬೆಟ್ಟು, ಕಂಗನಬೆಟ್ಟು, ಕಲ್ಮಾಡಿ, ಮೇಲ್ಪೇಟೆ, ಮಲ್ಪೆ, ತೆಂಕನಿಡಿಯೂರು, ಬಡಾನಿಡಿಯೂರು, ಕೊಳ, ತೊಟ್ಟಂ, ನಿಟ್ಟೂರು, ಅಡ್ಕದಕಟ್ಟೆ, ಬಾಳಿಗ ಫಿಶ್ ನೆಟ್, ಪುತ್ತೂರು, ಪೆರಂಪಳ್ಳಿ, ದೊಡ್ಡಣಗುಡ್ಡೆ, ಕಲ್ಯಾಣಪುರ, ಶಾಂತಿವನ, ಪೊಟ್ಟುಕೆರೆ, ಗರಡಿಮಜಲು, ತೆಂಕನಿಡಿಯೂರು, ಸುಬ್ರಹ್ಮಣ್ಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಣಿಪಾಲ ಹಾಗೂ ಹಿರಿಯಡ್ಕ ವಿದ್ಯುತ್ ಉಪಕೇಂದ್ರದ ಫೀಡರಿನಲ್ಲಿ ನಿರ್ವಹಣೆ ಕಾರಣ ಈಶ್ವರ ನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿ ನಗರ, 80 ಬಡಗುಬೆಟ್ಟು, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಹರಿಖಂಡಿಗೆ, ವಡ್ಜ, ಸಾಣೆಕಲ್ಲು, ಮಾಣೈ, ನವಗ್ರಾಮ, ಪಂಚನಬೆಟ್ಟು, ಮೂಂಡುಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ.
ಬ್ರಹ್ಮಾವರದ ಬಾರ್ಕೂರಿನಲ್ಲಿ ಕೊಂಕಣ್ ರೈಲ್ವೆ ಕಾರ್ಪೋರೇಷನ್ ರೈಲ್ವೆ ಮಾರ್ಗದ ವಿದ್ಯುದೀಕರಣಕ್ಕಾಗಿ ನಿರ್ಮಿಸುತ್ತಿರುವ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ಕೇಂದ್ ಹಾಗೂ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ನಡೆಯುತ್ತಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡು ನೀಲಾವರ, ಬೆಣ್ಣೆಕುದ್ರು, ಹೆಗ್ಗುಂಜೆ, ಮೈರ್ ಕೋಮೆ, ಶಿರೂರು, ವಾಜನೂರು, ಆವರ್ಸೆ, ಮುದ್ದುಮನೆ, ಕಿರಾಡಿ, ನಂಚಾರು, ಹಿಲಿಯಾಣ, ಆಮ್ರಕಲ್ಲು, ನೀರ್ ಜೆಡ್ಡು, ಮಂದಾರ್ತಿ, ಮುಂಡಾಡಿ, ಕಾಡೂರು, ನಡೂರು, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ. ಫಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿ ಮಜಲು ಪ್ರದೇಶಗಳಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30ರವರೆಗೆ ವ್ಯತ್ಯಯವಾಗಲಿದೆ.
ಯಶ್ ಟೆಕ್, ಪಣಿಯೂರು, ಬರ್ಪಾಣಿ, ಎಲ್ಲೂರು, ಅದಮಾರು, ಕುಂಜನಗುಡ್ಡೆ, ಗುರುಗುಂಡಿ, ಕುತ್ಯಾರು, ಬೆಳಪು, ಇಂಡಸ್ಟ್ರಿಯಲ್ ಲೇ ಔಟ್, ಅಚ್ಚಡ, ಕಟಪಾಡಿ, ಮಟ್ಟು, ಯೇಣಗುಡ್ಡೆ, ಕೋಟೆ, ಪೊಸಾರು, ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5.30ರ ವರೆಗೆ, ಹಂಗಳೂರು, ಕೋಟೇಶ್ವರ, ಕುಂಭಾಶಿ, ತೆಕ್ಕಟ್ಟೆ, ಬೀಜಾಡಿ ಮತ್ತು ಗೋಪಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.