ಬಾಳೆಹೊನ್ನೂರಿನ ಕೃಷಿಕ ಮಧು ಎಂಬುವರು ದೇವಸ್ಥಾನಕ್ಕೆ ಆನೆಯನ್ನು ದಾನವಾಗಿ ಕೊಟ್ಟಿದ್ದರು. ದೇಗುಲದ ಧಾರ್ಮಿಕ ವಿಧಿವಿಧಾನಗಳಿಗೆ ಆನೆಯನ್ನು ಬಳಸಿಕೊಳ್ಳಲಾಗುತ್ತಿತ್ತು. ಕೊಲ್ಲೂರಿಗೆ ಬರುವ ಭಕ್ತರಿಗೆ ಇಂದಿರಾ ಆನೆ ವಿಶೇಷ ಆಕರ್ಷಣೆಯಾಗಿತ್ತು. ಸ್ಥಳೀಯರು ಆನೆಯೊಂದಿಗೆ ಭಾವನಾತ್ಮಕ ನಂಟು ಹೊಂದಿದ್ದರು. ಆನೆ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಪೇಟೆಯ ವರ್ತಕರು, ನಾಗರಿಕರು ಶವವನ್ನು ವೀಕ್ಷಣೆ ಮಾಡಿ ಕಂಬನಿ ಮಿಡಿಯುತ್ತಿದ್ದಾರೆ.