ಇನ್ನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ರೈಟ್ ಕಂಪನಿ ಘನ ತ್ಯಾಜ್ಯವನ್ನು ತೆರವುಗೊಳಿಸಲು ಬೆಳಪುವಿನ ರಝಾಕ್ ಅವರಿಗೆ ಗುತ್ತಿಗೆ ನೀಡಿದೆ. ಗುತ್ತಿಗೆ ಪಡೆದ ರಝಾಕ್ ಆ ಕಸವನ್ನು ಖಾಲಿ ಜಾಗದಲ್ಲಿ ಸುರಿದು ಹೋಗಿದ್ದರು. ಎಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಂತ್ ಕುಮಾರ್ ಕಸವನ್ನು ನೀಡಿದ ಕಂಪನಿಯ ಅಧಿಕಾರಿಗಳನ್ನು ಮತ್ತು ಕಸ ಸುರಿದ ರಝಾಕ್ ಅವರನ್ನು ಸ್ಥಳಕ್ಕೆ ಕರೆಯಿಸಿ ₹5 ಸಾವಿರ ದಂಡ ವಿಧಿಸಿದರು.