ಈ ಸಮಸ್ಯೆ ಸರಿಪಡಿಸಲು ವೈದ್ಯರು ಮತ್ತೊಂದು ಶಸ್ತ್ರಚಿಕಿತ್ಸೆಯ ಅವಶ್ಯಕತೆಯ ಬಗ್ಗೆ ಆಲೋಚಿಸಿದ್ದರು. ಆದರೆ, ರೋಗಿಯ ಸ್ಥಿತಿ ಸರಿಯಾಗಿಲ್ಲದ ಕಾರಣ ಶಸ್ತ್ರಚಿಕಿತ್ಸೆ ಮಾಡುವುದು ಕಷ್ಟವಾಗಿತ್ತು. ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ಮತ್ತು ಡಾ.ಬಾಲಾಜಿ, ಸರ್ಜಿಕಲ್ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ.ನವೀನ ಕುಮಾರ್, ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೋಸೆಫ್ ಥಾಮಸ್ ವೈದ್ಯರ ತಂಡವು ರೋಗಿಗೆ ಎಂಡೋಸ್ಪಾಂಜ್/ವ್ಯಾಕ್ಯೂಮ್ ಥೆರಪಿ ಎಂಬ ನವೀನ ಚಿಕಿತ್ಸೆ ನೀಡಲು ನಿರ್ಧರಿಸಿತು.