<p><strong>ಉಡುಪಿ:</strong> ಕುಂದಾಪುರ ತಾಲ್ಲೂಕಿನ ನಾಡಾ ಗ್ರಾಮ ಪಂಚಾಯ್ತಿಯಲ್ಲಿ ಮೀಸಲಿಟ್ಟಿರುವ ಜಮೀನಿನಲ್ಲಿ ಎಂಡೋ ಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರ ನಿರ್ಮಿಸಲು ಅನುದಾನ ಮಂಜೂರು ಮಾಡಬೇಕು ಸೇರಿದಂತೆ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಕೋಣಿ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಎಂಡೋ ಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರ ನಿರ್ಮಾಣ ಹಾಗೂ ಸಲಕರಣೆಗಳಿಗೆ ಸರ್ಕಾರಕ್ಕೆ ₹ 11 ಕೋಟಿ ಪ್ರಸ್ತಾವ ಸಲ್ಲಿಸಲಾಗಿದೆ. ಇದುವರೆಗೂ ಅನುದಾನ ಮಂಜೂರಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಎಂಡೋಸಲ್ಫಾನ್ ಪೀಡಿತರಿಗೆ ನೀಡುತ್ತಿರುವ ಸಹಾಯಧನ ಕ್ರಮವಾಗಿ ₹1,500ದಿಂದ 3,000, 3,000ರಿಂದ 6,000ಕ್ಕೆ ಏರಿಸಬೇಕು. ಬುದ್ದಿಮಾಂಧ್ಯ ಹಾಗೂ ಅಂಗವಿಕಲರನ್ನು ನೋಡಿಕೊಳ್ಳುವ ಪೋಷಕರಿಗೆ ಕನಿಷ್ಠ ₹ 3,000 ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂತ್ರಸ್ತರಿಗೆ ಖಾಸಗಿ ಬಸ್ಗಳಲ್ಲಿ ಶೇ 50ರಷ್ಟು ರಿಯಾಯಿತಿ, ಅಂತ್ಯೋದಯ ಕಾರ್ಡ್ ಸೌಲಭ್ಯ, ಅಂಗವಿಕಲರ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಬೇಕು. ಜಿಲ್ಲಾಮಟ್ಟದ ಸಮಿತಿಗೆ ಅಂಗವಿಕಲರ ಪೋಷಕರನ್ನು ನೇಮಿಸಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಹೆಬ್ಬಾರ್, ಕಾರ್ಯದರ್ಶಿ ಕೃಷ್ಣ ಪೂಜಾರಿ, ಸಹ ಕಾರ್ಯದರ್ಶಿ ನಾರಾಯಣ ಶೇರಿಗಾರ, ಕೋಶಾಧಿಕಾರಿ ಬಾಬು ದೇವಾಡಿಗ, ಗಣಪತಿ ಪೂಜಾರಿ, ಇಂದಿರಾ ಹೆಗ್ಡೆ ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕುಂದಾಪುರ ತಾಲ್ಲೂಕಿನ ನಾಡಾ ಗ್ರಾಮ ಪಂಚಾಯ್ತಿಯಲ್ಲಿ ಮೀಸಲಿಟ್ಟಿರುವ ಜಮೀನಿನಲ್ಲಿ ಎಂಡೋ ಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರ ನಿರ್ಮಿಸಲು ಅನುದಾನ ಮಂಜೂರು ಮಾಡಬೇಕು ಸೇರಿದಂತೆ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಕೋಣಿ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಎಂಡೋ ಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರ ನಿರ್ಮಾಣ ಹಾಗೂ ಸಲಕರಣೆಗಳಿಗೆ ಸರ್ಕಾರಕ್ಕೆ ₹ 11 ಕೋಟಿ ಪ್ರಸ್ತಾವ ಸಲ್ಲಿಸಲಾಗಿದೆ. ಇದುವರೆಗೂ ಅನುದಾನ ಮಂಜೂರಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಎಂಡೋಸಲ್ಫಾನ್ ಪೀಡಿತರಿಗೆ ನೀಡುತ್ತಿರುವ ಸಹಾಯಧನ ಕ್ರಮವಾಗಿ ₹1,500ದಿಂದ 3,000, 3,000ರಿಂದ 6,000ಕ್ಕೆ ಏರಿಸಬೇಕು. ಬುದ್ದಿಮಾಂಧ್ಯ ಹಾಗೂ ಅಂಗವಿಕಲರನ್ನು ನೋಡಿಕೊಳ್ಳುವ ಪೋಷಕರಿಗೆ ಕನಿಷ್ಠ ₹ 3,000 ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂತ್ರಸ್ತರಿಗೆ ಖಾಸಗಿ ಬಸ್ಗಳಲ್ಲಿ ಶೇ 50ರಷ್ಟು ರಿಯಾಯಿತಿ, ಅಂತ್ಯೋದಯ ಕಾರ್ಡ್ ಸೌಲಭ್ಯ, ಅಂಗವಿಕಲರ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಬೇಕು. ಜಿಲ್ಲಾಮಟ್ಟದ ಸಮಿತಿಗೆ ಅಂಗವಿಕಲರ ಪೋಷಕರನ್ನು ನೇಮಿಸಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಹೆಬ್ಬಾರ್, ಕಾರ್ಯದರ್ಶಿ ಕೃಷ್ಣ ಪೂಜಾರಿ, ಸಹ ಕಾರ್ಯದರ್ಶಿ ನಾರಾಯಣ ಶೇರಿಗಾರ, ಕೋಶಾಧಿಕಾರಿ ಬಾಬು ದೇವಾಡಿಗ, ಗಣಪತಿ ಪೂಜಾರಿ, ಇಂದಿರಾ ಹೆಗ್ಡೆ ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>