<p><strong>ಬ್ರಹ್ಮಾವರ:</strong> ಕಠಿಣ ಪರಿಶ್ರಮ, ಕೆಲಸದ ಮೇಲೆ ಆಸಕ್ತಿ, ಆತ್ಮವಿಶ್ವಾಸ, ಶ್ರದ್ಧೆಯಿಂದ ಯಶಸ್ಸು ಸಾಧಿಸಲು ಸಾಧ್ಯ ಎಂದು ಉದ್ಯಮಿ ಸುಜಾತಾ ಅಂದ್ರಾದೆ ಹೇಳಿದರು.</p>.<p>ಇಲ್ಲಿನ ರುಡ್ಸೆಟ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಉದ್ಯೋಗ ಸೃಜನೆ ಕಾರ್ಯಕ್ರಮದಡಿ (ಪಿಎಂಇಜಿಪಿ ) ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ, ದುರಸ್ತಿ ಮತ್ತು ಸೇವೆ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತರಬೇತಿಯ ಅವಧಿಯಲ್ಲಿ ಸರಿ ತಪ್ಪುಗಳ ಅರಿವು ಸಿಗುತ್ತದೆ. ಗುಣಮಟ್ಟದ ಕುರಿತು ಕಾಳಜಿ ವಹಿಸಿ ಎಂದು ಹೇಳಿದರು.</p>.<p>ರುಡ್ಸೆಟ್ ನಿರ್ದೇಶಕ ಬೊಮ್ಮಯ್ಯ ಎಂ. ಮಾತನಾಡಿ, ಪ್ರಮಾಣಪತ್ರ, ಸಬ್ಸಿಡಿ ಲೋನ್ಗಳ ಉದ್ದೇಶಕ್ಕಾಗಿ ತರಬೇತಿ ಪಡೆದುಕೊಳ್ಳುವ ಬದಲು ವೈಯಕ್ತಿಕ ಬೆಳವಣಿಗೆ, ಉದ್ಯಮದ ಬೆಳವಣಿಗಾಗಿ ಪಡೆಯಿರಿ. ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಬಳಸಿಕೊಳ್ಳಿ. ಸಂಸ್ಥೆ ಹಾಗೂ ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡು ಯಶಸ್ವಿ ಉದ್ಯಮಿಗಳಾಗಿ ಎಂದರು.</p>.<p>ಅತಿಥಿ ಉಪನ್ಯಾಸಕ ಗುರುರಾಜ್ ಭಾಗವಹಿಸಿದ್ದರು. ಉಪನ್ಯಾಸಕರಾದ ಚೈತ್ರಾ ಕೆ. ಸ್ವಾಗತಿಸಿದರು. ಸಂತೋಷ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಕಠಿಣ ಪರಿಶ್ರಮ, ಕೆಲಸದ ಮೇಲೆ ಆಸಕ್ತಿ, ಆತ್ಮವಿಶ್ವಾಸ, ಶ್ರದ್ಧೆಯಿಂದ ಯಶಸ್ಸು ಸಾಧಿಸಲು ಸಾಧ್ಯ ಎಂದು ಉದ್ಯಮಿ ಸುಜಾತಾ ಅಂದ್ರಾದೆ ಹೇಳಿದರು.</p>.<p>ಇಲ್ಲಿನ ರುಡ್ಸೆಟ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಉದ್ಯೋಗ ಸೃಜನೆ ಕಾರ್ಯಕ್ರಮದಡಿ (ಪಿಎಂಇಜಿಪಿ ) ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ, ದುರಸ್ತಿ ಮತ್ತು ಸೇವೆ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತರಬೇತಿಯ ಅವಧಿಯಲ್ಲಿ ಸರಿ ತಪ್ಪುಗಳ ಅರಿವು ಸಿಗುತ್ತದೆ. ಗುಣಮಟ್ಟದ ಕುರಿತು ಕಾಳಜಿ ವಹಿಸಿ ಎಂದು ಹೇಳಿದರು.</p>.<p>ರುಡ್ಸೆಟ್ ನಿರ್ದೇಶಕ ಬೊಮ್ಮಯ್ಯ ಎಂ. ಮಾತನಾಡಿ, ಪ್ರಮಾಣಪತ್ರ, ಸಬ್ಸಿಡಿ ಲೋನ್ಗಳ ಉದ್ದೇಶಕ್ಕಾಗಿ ತರಬೇತಿ ಪಡೆದುಕೊಳ್ಳುವ ಬದಲು ವೈಯಕ್ತಿಕ ಬೆಳವಣಿಗೆ, ಉದ್ಯಮದ ಬೆಳವಣಿಗಾಗಿ ಪಡೆಯಿರಿ. ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಬಳಸಿಕೊಳ್ಳಿ. ಸಂಸ್ಥೆ ಹಾಗೂ ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡು ಯಶಸ್ವಿ ಉದ್ಯಮಿಗಳಾಗಿ ಎಂದರು.</p>.<p>ಅತಿಥಿ ಉಪನ್ಯಾಸಕ ಗುರುರಾಜ್ ಭಾಗವಹಿಸಿದ್ದರು. ಉಪನ್ಯಾಸಕರಾದ ಚೈತ್ರಾ ಕೆ. ಸ್ವಾಗತಿಸಿದರು. ಸಂತೋಷ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>