ದೇವರ ದರ್ಶನದ ಬಳಿಕ ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು, ಕೆಲಹೊತ್ತು ಸಮಾಲೋಚನೆ ನಡೆಸಿದರು. ಬಳಿಕ ಕುರುಬ ಸಮಾಜದ ಮುಖಂಡರು ರಥಬೀದಿಯಲ್ಲಿ ಕನಕನ ಗುಡಿ ನಿರ್ಮಾಣ ಮಾಡಬೇಕು ಎಂದು ಮನವಿ ಸಲ್ಲಿಸಿದರು.